ಹಿಂದೂ ಸಮ್ಮೇಳನ ಕಾರ್ಯಕ್ರಮಕ್ಕೆ ಜ್ಯೊತಿ ಬೆಳಗುವ ಮೂಲಕ ಚಾಲನೆ
Hindu Sammelana program kicks off with lighting of lamp
ಕಂಪ್ಲಿ 24: ಪ್ರತಿಯೊಬ್ಬರೂ ಸಮಾಧಿಯ ಚಿಂತನೆ ಮಾಡದೇ ಸಮಾಜದ ಚಿಂತನೆ ಮಾಡಿದಾಗ ಮಾತ್ರ ದೇಶದ ಅಭಿವೃದ್ದಿ ಸಾಧ್ಯವೆಂದು ಕೊಟ್ಟೂರು ಸಂಸ್ಥಾನ ಮಠದ ಕುರುಗೊಡು ಮತ್ತು ಗರಗ ನಾಗಲಾಪುರ ಶಾಖಮಠಗಳ ಪೀಠಾಧಿಪತಿ ಶ್ರೀ ನಿರಂಜನ ಪ್ರಭುಸ್ವಾಮಿಗಳು ತಿಳಿಸಿದರು. ಅವರು ತಾಲ್ಲೂಕಿನ ರಾಮಸಾಗರ ಗ್ರಾಮದಲ್ಲಿ ಕಂಪ್ಲಿ ಮಂಡಲ ಹಿಂದೂ ಸಮ್ಮೇಳನ ಸಮಿತಿ ಏರಿ್ಡಸಿದ್ದ ಹಿಂದೂ ಸಮ್ಮೇಳನ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿ ಮಾತನಾಡಿ, ಸನಾತನ ಪರಂಪರೆಯನ್ನು ಪ್ರತಿಯೊಬ್ಬರೂ ಪಾಲಿಸಬೇಕು, ಯುವಜನತೆ ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರುಹೋಗದೇ ನಮ್ಮ ಸನಾತನ ಸಂಸ್ಕಾರ ಹಾಗೂ ಸಂಸ್ಕೃತಿಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕಾಗಿದೆ ಎಂದರು. ಹಿಂದೂ ಸಮ್ಮೇಳನದಲ್ಲಿ ದಿಕ್ಸೂಚಿ ಭಾಷಣ ಮಾಡಿದ ವಕ್ತಾರರಾದ ಕೇಶವ ಜೀ ಮಾತನಾಡಿ, ಗ್ರಾಮಗಳಲ್ಲಿ ಹಿಮದೂ ಸಮ್ಮೇಳನಗಳನ್ನು ಏರಿ್ಡಸಲಾಗುತ್ತಿದೆ. ಇಡೀ ಹಿಂದೂ ಸಮಾಜವನ್ನು ಒಂದು ಗೂಡಿಸುವ ಏಕೈಕ ಉದ್ದೇಶವೇ ಈ ಹಿಂದೂ ಸಮ್ಮೇಳನದ ಮೂಲುದ್ದೇಶವಾಗಿದೆ ಎಂದರು. ವೇದಿಕೆಯಲ್ಲಿ ಗ್ರಾಮದ ಮುಖಂಡರಾದ ಎಚ್.ಶಿವಶಂಕರಗೌಡ, ಹಿಂದೂ ಸಮ್ಮೇಳನ ಸಮಿತಿ ಮಂಡಲ ಅಧ್ಯಕ್ಷ ಎನ್.ಎಂ.ಪತ್ರೆಯ್ಯಸ್ವಾಮಿ, ಉಪಾಧ್ಯಕ್ಷ ಬಿ.ಎಂ.ಕರಿಬಸವಯ್ಯಸ್ವಾಮಿ ಇದ್ದರು. ಎಸ್.ರೇಣೂಕಾರಾಜ್ ಸ್ವಾಗತಿಸಿದರೆ, ರಾಜು ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಗ್ರಾಮದ ಎಲ್ಲಾ ಸಮಾಜಗಳ ಮುಖಂಡರು, ಯುವಕರು, ಮಹಿಳೆಯರು, ವಿವಿಧ ಗ್ರಾಮಗಳ ಮುಖಂಡರು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 