ಜ. 31 ರಂದು ಶಿರಹಟ್ಟಿಯಲ್ಲಿ ಹಿಂದೂ ಸಮ್ಮೇಳನ
Hindu conference in Shirahatti on Jan. 31
ಶಿರಹಟ್ಟಿ 29 : ಹೋಬಳಿ ಮಟ್ಟದ ಹಿಂದೂ ಸಮ್ಮೇಳನ ಕಾರ್ಯಕ್ರಮ ದಿನಾಂಕ 31-01-2026 ರ ಶನಿವಾರ ಸಾಯಂಕಾಲ 5 ಗಂಟೆಗೆ ಪಟ್ಟಣದ ಸಿಸಿಎನ್ ಆಂಗ್ಲ ಮಾಧ್ಯಮಿಕ ಶಾಲೆಯ ಆವರಣದಲ್ಲಿ ಜರುಗುವುದು ಎಂದು ಹಿಂದೂ ಸಮ್ಮೇಳನದ ಅಧ್ಯಕ್ಷ ತಿಪ್ಪಣ್ಣ ಕೊಂಚಿಗೇರಿ ಹೇಳಿದರು.
ಅವರು ಗುರುವಾರ ಪಟ್ಟಣದ ಶಿಕ್ಷಕರ ಭವನದಲ್ಲಿ ಹಿಂದೂ ಸಮ್ಮೇಳನದ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ, ದಿನಾಂಕ 31-01-2026 ರ ಶನಿವಾರ ಮಧ್ಯಾಹ್ನ 3 ಗಂಟೆಗೆ ಅಂಬಾಭವಾನಿ ದೇವಸ್ಥಾನದಿಂದ ಶೋಭಾಯಾತ್ರೆ ಹೊರಟು ಮಟ್ಟಿಭಾವಿ, ಮೇಗೇರಿ ಓಣಿ, ಬೀರೇಶ್ವರ ದೇವಸ್ಥಾನ, ಸಂಗೊಳ್ಳಿ ರಾಯಣ್ಣ ವೃತ್ತ, ವಾಲ್ಮೀಕಿ, ಗಾಂಧಿ ವೃತ್ತ, ಅಂಬೇಡ್ಕರ ವೃತ್ತ ಸೇರಿದಂತೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಸಾರ್ವಜನಿಕ ಸಮಾರಂಭ ಸ್ಥಳವಾದ ಸಿಸಿಎನ್ ಆಂಗ್ಲ ಮಾಧ್ಯಮಿಕ ಶಾಲೆಗೆ ತಲುಪುವುದು. ಈ ಕಾರ್ಯಕ್ರಮದಲ್ಲಿ ಸುಮಾರು 2500 ಜನರು ಸೇರುವ ನೀರೀಕ್ಷೆಯಿದೆ. ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು ಭಾಗವಹಿಸುವರು ಎಂದರು.
ಈ ಸಂದರ್ಭದಲ್ಲಿ ನಾಗರಾಜ ಲಕ್ಕುಂಡಿ, ನಟರಾಜ್ ರಾನಡೆ, ರವಿ ಗೋ. ಬೇಂದ್ರೆ, ನೀಲಪ್ಪ ಚಕ್ರಸಾಲಿ, ಫಕ್ಕೀರೇಶ ರಟ್ಟಿಹಳ್ಳಿ, ಯಲ್ಲಪ್ಪ ಇಂಗಳಗಿ, ಕುಮಾರಿ ಪುತುಳಾಬಾಯಿ ಪರಬತ್, ಶ್ರೀನಿವಾಸ ಬಾರ್ಬರ, ರಾಮಣ್ಣ ಕಮ್ಮಾರ ಹಾಗೂ ಮಹಾದೇವಪ್ಪ ಹಡಪದ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 