ಗೃಹ ಸಚಿವ ಅಮಿತ್ ಶಾ ತಕ್ಷಣ ಕ್ಷಮೆ ಕೇಳಬೇಕು: ಪ್ರಕಾಶ ಬಡೆಣ್ಣವರ
Home Minister Amit Shah should apologize immediately: Prakash Badennavara
ಗೃಹ ಸಚಿವ ಅಮಿತ್ ಶಾ ತಕ್ಷಣ ಕ್ಷಮೆ ಕೇಳಬೇಕು: ಪ್ರಕಾಶ ಬಡೆಣ್ಣವರ
ಶಿರಹಟ್ಟಿ 24 : ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ್ದ ಅವಹೇಳನಾ ಹೇಳಿಕೆಯನ್ನು ಖಂಡಿಸಿ ಶಿರಹಟ್ಟಿ ಪಟ್ಟಣದ ನೆಹರು ವೃತ್ತದಲ್ಲಿ ತಾಲೂಕಾ ಎಸ್ಡಿಪಿಐ ಕಾರ್ಯಕರ್ತರು ದೀಡೀರನೆ ಪ್ರತಿಭಟನೆಗೆ ಮುಂದಾದರು.ಈ ಸಂದರ್ಭದಲ್ಲಿ ಎಸ್ಡಿಪಿಐ ಮುಖಂಡ ಪ್ರಕಾಶ್ ಬಡೆಣ್ಣವರ ಮಾತನಾಡಿ, ಇಡೀ ರಾಷ್ಟ್ರಕ್ಕೆ ಸಂವಿಧಾನವನ್ನು ನೀಡಿದ ಸಂವಿಧಾನ ಪಿತಾಮಹ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡಿದ ಮಾತುಗಳು ನಮ್ಮೆಲ್ಲರಿಗೂ ಬಹಳ ನೋವನ್ನುಂಟು ಮಾಡಿದೆ, ತಕ್ಷಣವೇ ಗೃಹ ಸಚಿವ ಅಮಿತ್ ಶಾ ಅವರು ಕ್ಷಮೆ ಯಾಚಿಸಬೇಕು. ಇಲ್ಲವಾದಲ್ಲಿ ರಾಷ್ಟ್ರ ವ್ಯಾಪಿ ಪ್ರತಿಭಟನೆಗೆ ಮುಂದಾಗಬೇಕಾಗುತ್ತದೆ ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.ವಕೀಲರಾದ ಎಎ ಬೇವಿನಮರದ, ಅಬ್ದುಲ್ ಕಾಗದಗಾರ, ಹಜರತಲಿ ತಹಸೀಲ್ದಾರ, ಸಯ್ಯದ್ ಮಂಡಳ, ಇಸ್ಮಾಯಿಲ್ ನದಾಫ, ದಸ್ತಗೀರ ಜಂಗಿ, ಇಜಾಜ್ ಮುಕಾನದಾರ, ಮಂಜುನಾಥ ಗುಡಿಮನಿ, ಗೌಸ್ ಮಕಾನದಾರ, ಇಮಾಮಹುಸೇನ ಹಮ್ಮಗಿ, ಮಿನಾಜ ಬಳಿಗೇರ, ಬಾಬುಸಾಬ ಢಾಲಾಯುತ, ಬಾಬುಸಾಬ ಕನಕವಾಡ ಸೇರಿದಂತೆ ನೂರಾರು ಎಸ್ ಡಿ ಪಿ ಐ ಕಾರ್ಯಕರ್ತರು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 