ಎಲ್ಲರಿಗೂ ಮನೆ: ವಸತಿ ಸಮುಚ್ಛಯ ಕಾಮಗಾರಿ ವೀಕ್ಷಣೆ
ಗದಗ 08: ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಎಲ್ಲರಿಗೂ ಮನೆ 2022ರ ಯೋಜನೆಯಡಿ ಗದಗ-ಬೆಟಗೇರಿ ನಗರ ಗಂಗಿಮಡಿಯಲ್ಲಿ ನಿಮರ್ಿಸುತ್ತಿರುವ 2ನೇ ಹಂತದ ವಸತಿ ಸಮುಚ್ಛಯ ಕಾಮಗಾರಿಯನ್ನು ರಾಜ್ಯದ ಕೌಶಲ್ಯಾಭಿವೃದ್ಧಿ, ಮುಜರಾಯಿ ಇಲಾಖೆಗಳ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಪಿ.ಟಿ.ಪರಮೇಶ್ವರ ನಾಯ್ಕ ಅವರಿಂದು ವೀಕ್ಷಿಸಿದರು.
ಗದಗ-ಬೆಟಗೇರಿ ನಗರ ಸಭೆಯ ಈ ವಸತಿ ಸಮುಚ್ಛಯ 51 ಎಕರೆ 27 ಗುಂಟೆ ಜಾಗೆಯಲ್ಲಿ ಮೊದಲ ಮಹಡಿ ಘಟಕದೊಂದಿಗೆ ಒಟ್ಟು 3630 ಮನೆಗಳ ನಿಮರ್ಾಣ ಯೋಜನೆ ಇದಾಗಿದೆ ಎಂದು ಶಾಸಕ ಎಚ್.ಕೆ.ಪಾಟೀಲ ನುಡಿದರು.
ಪ್ರತಿ ಮನೆಯ ಕಾಪರ್ೆಟ ಏರಿಯಾ 355 ಚದುರ ಅಡಿ ಇರಲಿದ್ದು ಈ ಯೋಜನೆಗೆ ಕೇಂದ್ರ ಸಕರ್ಾರ 54.45 ಕೋಟಿ ರೂ. ರಾಜ್ಯ ಸಕರ್ಾರ 49.42 ಕೋಟಿ ರೂ. ಫಲಾನುಭವಿಗಳ ವಂತಿಕೆ 137.65 ಕೋಟಿ ಹಾಗೂ ನಗರಸಭೆಯ ವಂತಿಕೆ 2.45 ಕೋಟಿ ರೂ. ಇರಲಿದ್ದು 2020ರ ಮಾರ್ಚ ತಿಂಗಳ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳ್ಳಬೇಕಿದೆ ಎಂದು ಗದಗ-ಬೆಟಗೇರಿ ನಗರಸಭೆ ಪೌರಾಯುಕ್ತರು ಯೋಜನೆ ವಿವರ ನೀಡಿದರು.
ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ ಚವ್ಹಾಣ, ಉಪವಿಭಾಗಾಧಿಕಾರಿ ಪಿ.ಎಸ್.ಮಂಜುನಾಥ, ಜಿ.ಪಂ. ಸದಸ್ಯರಾದ ವಾಸಣ್ಣ ಕುರಡಗಿ, ಸಿದ್ದು ಪಾಟೀಲ, ಅಧಿಕಾರಿಗಳು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 