ಗ್ರಾ.ಪಂ ನೌಕರರ ಸಂಘದ (ಸಿಐಟಿಯು) ಪದಾಧಿಕಾರಿಗಳಿಗೆ ಸನ್ಮಾನ
Honored to the office bearers of the Gram Panchayat Employees' Union (CITU)
ಗ್ರಾ.ಪಂ ನೌಕರರ ಸಂಘದ (ಸಿಐಟಿಯು) ಪದಾಧಿಕಾರಿಗಳಿಗೆ ಸನ್ಮಾನ
ದೇವರಹಿಪ್ಪರಗಿ 06: ಕರ್ನಾಟಕ ರಾಜ್ಯ ಗ್ರಾ.ಪಂ ನೌಕರರ ಸಂಘ (ಸಿಐಟಿಯು)ತಾಲೂಕ ಸಮತಿಯ ಅಧ್ಯಕ್ಷ, ಪದಾಧಿಕಾರಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ತಾಲೂಕ ಸಮಿತಿಯ ನೂತನ ಪದಾಧಿಕಾರಿಗಳ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿದ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಭಾರತಿ ಚೆಲುವಯ್ಯ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು. ತಾಲೂಕು ಪಂ.ರಾ ಸಹಾಯಕ ನಿರ್ದೇಶಕ ಶಿವಾನಂದ ಮೂಲಿಮನಿ, ನರೇಗಾ ಸಹಾಯಕ ನಿರ್ದೇಶಕ ಶಾಂತಗೌಡ ನ್ಯಾಮಣ್ಣವರ ಹಾಗೂ ಯೋಜನಾ ಅಧಿಕಾರಿ ಶ್ರೀನಿವಾಸ ಪವಾರ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಅಧ್ಯಕ್ಷತೆಯನ್ನು ಗ್ರಾಪಂ ನೌಕರ ಸಂಘದ ಅಧ್ಯಕ್ಷ ಶಿವಾನಂದ ಬಿರಾದಾರ ವಹಿಸಿದ್ದರು. ಜಿಲ್ಲಾ ಮುಖಂಡರಾದ ಚಂದ್ರಶೇಖರ ವಾಲಿಕಾರ, ಲಾಲಹಮ್ಮದ ಶೇಖ್ ಸೇರಿದಂತೆ ತಾಲೂಕಿನ ಎಲ್ಲಾ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಭಾಗವಹಿಸಿದ್ದರು. ನಿರೂಪಣೆಯನ್ನು ಚಿಕ್ಕರೂಗಿ ಗ್ರಾಪಂ ಕಾರ್ಯದರ್ಶಿ ಚಿದಾನಂದಗೌಡ ಬಿರಾದಾರ ನೆರವೇರಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 