ಅಂಚೆ ಇಲಾಖೆಯ ಸಾಧಕರಿಗೆ ಸನ್ಮಾನ
Honours to achievers of the Postal Department
ಹಾವೇರಿ 19 : ಭಾರತೀಯ ಅಂಚೆ ಇಲಾಖೆಯ ಹಾವೇರಿ ವಿಭಾಗದಲ್ಲಿ ಕಳೆದ ಆರ್ಥಿಕ ವರ್ಷದಲ್ಲಿ ಉಳಿತಾಯ ಖಾತೆ , ಅಂಚೆ ಜೀವ ವಿಮೆ ಹಾಗೂ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ವಿಶೇಷ ಅಭಿಯಾನಗಳಲ್ಲಿ ಉತ್ತಮ ಪ್ರದರ್ಶನ ನೀಡಿದ ಸಿಬ್ಬಂದಿಗಳಿಗೆ ಸನ್ಮಾನ ಸಮಾರಂಭ ಇತ್ತೀಚೆಗೆ ಹಾವೇರಿ ನಗರದ ಜಿ.ಎಚ್.ಕಾಲೇಜ್ ಸಭಾಭವನದಲ್ಲಿ ಜರುಗಿತು.
ಹುಕ್ಕೇರಿಮಠ ಸದಾಶಿವ ಸ್ವಾಮೀಜಿಗಳು ಸಾನಿಧ್ಯವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಜಿಲ್ಲಾ ಸತ್ರ ನ್ಯಾಯಾಧೀಶರಾದ ಬಿರಾದಾರ ದೇವೇಂದ್ರ್ಪ ಅವರು ಸಿಬ್ಬಂದಿಗಳಿಗೆ ಪ್ರಶಸ್ತಿ ವಿತರಿಸಿ, ದಿನನಿತ್ಯದ ಕೆಲಸದ ನಡುವೆ ಈ ಕಾರ್ಯಕ್ರಮವು ಸಿಬ್ಬಂದಿಗಳಲ್ಲಿ ನವಚೈತನ್ಯ ಮೂಡಿಸಲು ಸಹಕಾರಿಯಾಗಿದೆ ಎಂದು ಹೇಳಿದರು.ಅಧ್ಯಕ್ಷತೆ ವಹಿಸಿದ್ದ ಮಂಜುನಾಥ ಹುಬ್ಬಳ್ಳಿಯವರ ಮಾತನಾಡಿ, ಸಿಬ್ಬಂದಿಗಳು ಇನ್ನು ಹೆಚ್ಚಿನ ಸಾಧನೆ ಮಾಡಬೇಕೆಂದು ಸಲಹೆ ನೀಡಿದರು.
ರಿಜಿನಲ್ ಮ್ಯಾನೇಜರ್ ಜಗದೀಶ ಚಿಕ್ಕನರಗುಂದ, ಸೀನಿಯರ್ ಮ್ಯಾನೇಜರ್ ಗಣೇಶ್ ಕುಮಾರ್, ನೀರೀಕ್ಷಕ ಬಿ.ಎಚ್ ನಾಯ್ಕ್, ಪೋಸ್ಟ್ ಮಾಸ್ಟರ್ ರಮೇಶ ಕಾಳೆ ಇತರರು ಉಪಸ್ಥಿತರಿದ್ದರು. ಸಹಾಯಕ ಅಧೀಕ್ಷಕ ಸೋಮಶೇಖರ ಸಾರಪುರೆ ಸ್ವಾಗತಿಸಿದರು. ಮಂಜುನಾಥ ದೊಡ್ಡಮನಿ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 