ಹೊಸಪೇಟೆ: ಬನಶಂಕರಿ ಸೇವಾ ಸಮಿತಿವತಿಯಿಂದ ಅನ್ನಸಂತರ್ಪಣೆ
ಲೋಕದರ್ಶನ ವರದಿ
ಹೊಸಪೇಟೆ 19: ನಗರದ ದೇವಾಂಗಪೇಟೆ ಬನಶಂಕರಿ ಸೇವಾ ಸಮಿತಿ ವತಿಯಿಂದ ತಿಂಗಳು ತಿರುಳು-2 ಕಾರ್ಯಕ್ರಮದ ಅಂಗವಾಗಿ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು.
ಪ್ರತಿ ಹುಣ್ಣಿಮೆಯಂದು ದೇವಾಲಯದ ಶ್ರೀ ಬನಶಂಕರಿ ದೇವಿ ಮೂರ್ತಿಗೆ ಅಭಿಷೇಕ, ಅಲಂಕಾರ ವಿಶೇಷ ಪೂಜೆ ನೆರವೇರಿಸಲಾಯಿತು. ನಂತರ ಜರುಗಿದ ಅನ್ನಸಂಪತರ್ಪಣೆ ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಪ್ರಸಾದ ಸ್ವೀಕಾರ ಮಾಡಿದರು. ಇದಕ್ಕೂ ಮುನ್ನ ಕಾರ್ಯಕ್ರಮದಲ್ಲಿ ಸಮಿತಿ ಕೋಶಾಧಿಕಾರಿ ಗೌಳಿ ಕುಮಾರ್ ಪ್ರಾಸ್ತವಿಕವಾಗಿ ಮಾತನಾಡಿ, ಸಮಾಜದ ಗುರು-ಹಿರಿಯರ ಮಾರ್ಗದರ್ಶನದಲ್ಲಿ ಭಕ್ತರಿಂದ ದೇಣಿಗೆ ಪಡೆದು, ಪ್ರತಿ ಹುಣ್ಣಿಮೆಯಂದು ಅನ್ನಸಂತರ್ಪಣೆ ನಡೆಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಕಾರ್ಯಕ್ರಮದ ಯಶ್ವಸಿಗಾಗಿ ಸಾರ್ವಜನಿಕರು ತನು, ಮನ, ಧನ ಅರ್ಪಿಸಬೇಕೆಂದು ಮನವಿ ಮಾಡಿದರು. ವೈದ್ಯಾಧಿಕಾರಿ ಡಾ.ನಾಗೇಂದ್ರ, ಕೊಳಗದ ಗಣಪತಿ, ಗೌಳಿ ಶಂಕರ್, ಕೆ.ಶಿವರಾಮ್, ಕೆ.ಎಂ. ಪ್ರಕಾಶ್, ಗುಜ್ಜಲ ಲಕ್ಷ್ಮಪ್ಪ, ಕಾಳ್ಗಿ ಸುದರ್ಶನ್, ಗೋಸಿ, ಶ್ರೀನಿವಾಸ, ಗುಜ್ಜಲ ಕೃಷ್ಣ, ವೆಂಕೋಬಣ್ಣ, ಸಾಯಿನಂದನ್, ಜಿ.ಬಸವರಾಜ್, ಗೌಳಿ ಪೀರಣ್ಣ, ಜಂಬಣ್ಣ, ಕೆ.ಅನಂತ್, ಕೆ.ಗಂಗಾಧರ, ಗೌಳಿ ಪಂಪಾಪತಿ, ಗೌಳಿ ರಜೀತ್ ಕುಮಾರ್, ಗೌಳಿ ಮನೋಜ್ ಕುಮಾರ್, ಟಿ.ವಿನಾಯಕ, ಪ್ರಿಯಾಂಕ, ರೋಜಾ ಹಾಗೂ ಅಶ್ವತಮ್ಮ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 