ಬೆಂಗಳೂರು ಅರಮನೆಯಲ್ಲಿ ಹುಕ್ಕೇರಿ ಶ್ರೀಗಳಿಗೆ ಅದ್ದೂರಿ ಸನ್ಮಾನ
ಬೆಳಗಾವಿ, 22:ಬೆಂಗಳೂರಿನ ಅರಮನೆಯ ಕಾರ್ಯಕ್ರಮದಲ್ಲಿ ಶ್ರೀಮದ್ ರಂಭಾಪುರೀ ಜಗದ್ಗುರು ಡಾ. ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳವರನ್ನು ಸನ್ಮಾನಿಸಿ ಆಶೀರ್ವದಿಸಿ ಮಾತನಾಡುತ್ತಾ ಗಡಿಭಾಗದಲ್ಲಿ ಕನ್ನಡದ ಉಳಿವಿಗಾಗಿ ನಿರಂತರವಾಗಿ ಶ್ರಮಿಸುತ್ತಿರುವ ಮಠ ಹುಕ್ಕೇರಿಯ ಹಿರೇಮಠ ಗುರು ವಿರಕ್ತರ ನಡುವೆ ಸೇತುವೆಯಾಗಿ ನಿಂತು ಕಾರ್ಯವನ್ನ ಮಾಡುತ್ತಿರುವ ಮಠ ಹುಕ್ಕೇರಿ ಹಿರೇಮಠ. ಸರ್ವ ಜನಾಂಗದವರನ್ನು ಪ್ರೀತಿಯಿಂದ ಕಾಣುತ್ತಿರುವ ಮಠ ಹುಕ್ಕೇರಿ ಹಿರೇಮಠ. ಈ ಮಠ ರಂಭಾಪುರಿ ಪೀಠದ ಶಾಖಾ ಮಠ ಎಂದು ಹೇಳಲು ಅತೀವ ಸಂತೋಷವಾಗುತ್ತದೆ. ಇವರ ನಿರಂತರ ಶ್ರಮ ಇವತ್ತು ನಾಡು ಅಷ್ಟೇ ಅಲ್ಲ ದೇಶ ಹೊರದೇಶಗಳಲ್ಲಿ ಕೂಡ ಜನ ಮೆಚ್ಚುಗೆಯನ್ನು ಪಡೆಯುತ್ತಿದೆ. ಯುವ ಸ್ವಾಮಿಗಳು ಇಂಥ ಕಾರ್ಯವನ್ನು ನಿರಂತರವಾಗಿ ಮಾಡಲಿ ಎಂದು ಶುಭವನ್ನು ಹಾರೈಸಿದರು.
ಈ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಯುವ ವೇದಿಕೆಯ ಅಧ್ಯಕ್ಷರಾದ ಪ್ರಶಾಂತ್ ಕಲ್ಲೂರ್ ಅವರು ಮಾತನಾಡಿ ಹುಕ್ಕೇರಿಯ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು ನಮ್ಮ ವೇದಿಕೆಯಿಂದ ನಡೆಯುತ್ತಿರುವ ಅರಮನೆ ಮೈದಾನದ ಕಾರ್ಯಕ್ರಮದಲ್ಲಿ ಭಾಗವಹಿಸಿ ನಮಗೆಲ್ಲ ಸ್ಫೂತರ್ಿಯಾಗಿ ನಿಂತಿದ್ದಾರೆ. ನಮ್ಮವೇದಿಕೆಗೆ ನಿರಂತರವಾಗಿ ಹರಸುತ್ತ ಬಂದಿರುವ ಶ್ರೀಗಳನ್ನು ಸನ್ಮಾನಿಸುತ್ತಿರುವುದು ನಮಗೆ ಅತೀವ ಸಂತೋಷ ತಂದಿದೆ ಎಂದರು.
ಈ ಸಂದರ್ಭದಲ್ಲಿ ಮಾತನಾಡಿದ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು ಭಾರತವನ್ನು ಇಡೀ ದೇಶ ವಿಶ್ವಗುರು ಎಂದು ಸ್ವೀಕರಿಸಿದೆ. ನಾವೆಲ್ಲರು ಈ ದೇಶದ ಸಂಸ್ಕ್ರತಿಗೆ, ಈ ದೇಶದ ಆಧ್ಯಾತ್ಮ ಶಕ್ತಿಗೆ ತಲೆಬಾಗಬೇಕು. ಆ ಕಾರ್ಯವನ್ನು ನಿರಂತರವಾಗಿ ಮಾಡುವಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳುತ್ತೇವೆ ಎಂದರು.
ಕಾರ್ಯಕ್ರಮದಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ, ಬೆಂಗಳೂರಿನ ಮೆಯರ್ ಗಂಗಾಂಬಿಕೆ ಮಲ್ಲಿಕಾಜರ್ುನ, ವೀರಶೈವ ವಿದ್ಯಾವರ್ಧಕ ಸಂಸ್ಥೆಯ ಅಧ್ಯಕ್ಷರಾದ ಪರಮಶಿವಯ್ಯನವರು, ಕನರ್ಾಟಕ, ಮಹಾರಾಷ್ಟ್ರದಿಂದ ಆಗಮಿಸಿರುವ ಒಂದು 150 ಕ್ಕೂ ಹೆಚ್ಚು ಸ್ವಾಮಿಗಳು ಉಪಸ್ಥಿತರಿದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 