ಮಾನವ ಹಕ್ಕುಗಳ ಆಯೋಗದ ನ್ಯಾಯಾಂಗದ ಸದಸ್ಯ ಎಸ್.ಕೆ.ವಂಟಿಗೋಡಿ ಜಿಲ್ಲಾಸ್ಪತ್ರೆಗೆ ಭೇಟಿ- ಪರೀಶೀಲನೆ
Human Rights Commission Judiciary Member S.K.Vantigodi visited District Hospital - Inspection
ಮಾನವ ಹಕ್ಕುಗಳ ಆಯೋಗದ ನ್ಯಾಯಾಂಗದ ಸದಸ್ಯ ಎಸ್.ಕೆ.ವಂಟಿಗೋಡಿ ಜಿಲ್ಲಾಸ್ಪತ್ರೆಗೆ ಭೇಟಿ- ಪರೀಶೀಲನೆ
ವಿಜಯಪುರ: ನ್ಯಾಯಾಂಗ ಸದಸ್ಯರು ಕರ್ನಾಟಕ ಮಾನವ ಹಕ್ಕುಗಳ ಆಯೋಗದ ನ್ಯಾಯಾಂಗ ಸದಸ್ಯರಾದ ಎಸ್.ಕೆ.ವಂಟಿಗೋಡಿ ಅವರು ಭಾನುವಾರ ಜಿಲ್ಲಾ ಆಸ್ಪತ್ರೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿ, ಕೂಲಕುಂಷವಾಗಿ ಪರೀಶೀಲನೆ ನಡೆಸಿದರು.
ಆಸ್ಪತ್ರೆಯಲ್ಲಿ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ಸ್ವಚ್ಚತೆ ಹಾಗೂ ಓಷಧಿಗಳ ಸಂಗ್ರಹಣೆಗೆ ಅವರು ್ಗ ಪ್ರಶಂಸೆ ವ್ಯಕ್ತಪಡಿಸಿದರು.
ಆಸ್ಪತ್ರೆಗೆ ಬರುವ ರೋಗಿಗಳಿಗೆ ಸರಿಯಾಗಿ ಓಷಧೋಪಚಾರ ಹಾಗೂ ಸೂಕ್ತ ಚಿಕಿತ್ಸೆ ಒದಗಿಸಬೇಕು ಎಂದು ವೈದ್ಯಾಧಿಕಾರಿಗಳಿಗೆ ಸೂಚಿಸಿದ ಅವರು, ಎಮ್.ಆರ್.ಐ. ಸಿ.ಟಿ. ಸ್ಕ್ಯಾನ್ ಸಮರ್ಕವಾಗಿ ನಿರ್ವಹಿಸಬೇಕು. ರೋಗಿಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಕೃಷ್ಣಾ ಡೈಗೋಸ್ಟೀಕ್ ಪುಣೆ ಸಂಸ್ಥೆಯ ಆಪರೇಟಿಂಗ್ ಮ್ಯಾನೇಜರ್ ಯೋಗೇಶ ಸರವೋರ್, ಲಿಗಲ್ ಅಡವೈಸರ್ ಹಾಗೂ ಎಚ್.ಆರ್. ಪಿಲಿಪ್ ಸಾಮಂತೆ, ಎಮ್.ಆರ್.ಐ. ಮ್ಯಾನೇಜರ್ ವಿಶಾಲ ಜಂಗಮ ಇವರಿಗೆ ಸೂಚನೆ ನೀಡಿದರು.
ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಕರಾದ ಡಾ,ಶಿವಾನಂದ ಮಾಸ್ತಿಹೊಳಿ ಅವರು ಜಿಲ್ಲಾಸ್ಪತ್ರೆಯ ವಿವಿಧ ವಿಭಾಗದ ಕುರಿತು ಮಾಹಿತಿ ನೀಡಿದರು.
ಈ ಸಂಧರ್ಬದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಿಧಿಕಾರಿ ಡಾ. ಸಂಪತ್ ಗುಣಾರಿ ಹಾಗೂ ಆಸ್ಪತ್ರೆಯ ಆರ್.ಎಮ.ಓ. ಡಾ: ಚಂದು ರಾಠೋಡ, ಎಬಿ-ಎಆರ್.ಕೆ. ನೋಡಲ್ ಅಧಿಕಾರಿಗಳಾದ ಡಾ:ಎ.ಜಿ.ಬಿರಾದಾರ, ಡಾ.ಶಶಿಕಲಾ ಹಿರೇಮನಿ, ವಿಜಯಪುರ ತಹಶೀಲ್ದಾರರಾದ ಪ್ರಶಾಂತ ಚನಗೊಂಡ ಉಪಸ್ಥಿತರಿದ್ದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 