ನೂರು ದಿನಗಳ ಕ್ಷಯ ರೋಗ ಮುಕ್ತ ಭಾರತ ಅಭಿಯಾನ
Hundred Days Tuberculosis Free India Campaign
ನೂರು ದಿನಗಳ ಕ್ಷಯ ರೋಗ ಮುಕ್ತ ಭಾರತ ಅಭಿಯಾನ
ಧಾರವಾಡ 30 : ನಿ-ಕ್ಷಯ ಅಭಿಯಾನ ಎಂಬ ಕಾರ್ಯಕ್ರಮವನ್ನು ಭಾರತ ಸರ್ಕಾರದ ಆಯುಷ್ ಮಂತ್ರಾಲಯವು ದೇಶದಾದ್ಯಂತ ಡಿಸೆಂಬರ 07, 2024 ರಿಂದ ಮಾರ್ಚ್ 24, 2025 ರವರೆಗೆ ನೂರು ದಿನಗಳ ಅವಧಿಗೆ ಕ್ಷಯ ರೋಗ ಮುಕ್ತ ಭಾರತ ಎಂಬ ಘೋಷ ವಾಕ್ಯದೊಂದಿಗೆ ಅಭಿಯಾನವನ್ನು ಆಯೋಜಿಸಲಾಗಿದೆ.
ಜಾತಾ ಕಾರ್ಯಕ್ರಮವನ್ನು ಆಯುಷ್ ಇಲಾಖೆಯಿಂದ ಧಾರವಾಡ ಹಳ್ಳಿಯಾಳ ರಸ್ತೆಯ ಶ್ರೀ ಮಹಾಗಣಪತಿ ಆಯುರ್ವೇದ ಮಹಾವಿದ್ಯಾಲಯದಲ್ಲಿ ಇಂದು (ಜ.30) ಬೆಳಿಗ್ಗೆ 10 ಘಂಟೆಗೆ ನಿ-ಕ್ಷಯ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಜಿಲ್ಲಾ ಆಯುಷ್ ಅಧಿಕಾರಿ ಡಾ. ಗಣೇಶ ಕಬಾಡ ಅವರು ಅಧ್ಯಕ್ಷತೆ ವಹಿಸಿ, ಜಾತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಧಾರವಾಡ ಹಳ್ಳಿಯಾಳ ರಸ್ತೆಯ ಶ್ರೀ ಮಹಾಗಣಪತಿ ಆಯುರ್ವೇದ ಮಹಾವಿದ್ಯಾಲಯ ಪ್ರಾಂಶುಪಾಲ ಡಾ.ತಗ್ಗಿ ಅವರು ಟಿಬಿ ಹರೇಗಾ ದೇಶ ಜಿತೇಗಾ ಎಂಬ ಪ್ರತಿಜ್ಞೆ ಕುರಿತಾಗಿ ಮಾತನಾಡಿದರು.
ಜಾತಾ ಕಾರ್ಯಕ್ರಮದಲ್ಲಿ ಅಧಿಕಾರಿಗಳು, ಸಿಬ್ಬಂದಿಯವರು ಮತ್ತು ಮಹಾವಿದ್ಯಾಲಯದ ಎಲ್ಲ ವಿದ್ಯಾರ್ಥಿಗಳು ಮತ್ತು ಎ.ಎಫ್.ಐ. ರಾಜ್ಯ ಉಪಾಧ್ಯಕ್ಷ ಡಾ.ಅಮೀತ ಮತ್ತು ಎ.ಎಫ್.ಐ ಜಿಲ್ಲಾಧ್ಯಕ್ಷ ಡಾ. ರವೀಂದ್ರ ವಾಯ್. ಮಾಂಡ್ರೆ, ಧಾರವಾಡ ಎ.ಎಫ್.ಐ ಹಾಗೂ ಧಾರವಾಡ ಜಿಲ್ಲೆಯ ಆಯುಷ್ ಇಲಾಖೆಯ ಹಿರಿಯ ವೈದ್ಯಾಧಿಕಾರಿಗಳು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 