ರಾಷ್ಟ್ರಭಾವ ಜಾಗೃತಗೊಳಿಸುತ್ತಿರುವ ಆರ್‌ಎಸ್‌ಎಸ್‌ಗೆ ನೂರರ ಸಂಭ್ರಮ

ರಾಷ್ಟ್ರಭಾವ ಜಾಗೃತಗೊಳಿಸುತ್ತಿರುವ ಆರ್‌ಎಸ್‌ಎಸ್‌ಗೆ ನೂರರ ಸಂಭ್ರಮ Hundreds of people celebrate RSS for awakening nationalism

ರಾಷ್ಟ್ರಭಾವ ಜಾಗೃತಗೊಳಿಸುತ್ತಿರುವ ಆರ್‌ಎಸ್‌ಎಸ್‌ಗೆ ನೂರರ ಸಂಭ್ರಮ 

ಹೂವಿನಹಡಗಲಿ 25: ಸಮಾಜವನ್ನು ಆವರಿಸುತ್ತಿರುವ ಸಂಘ ಚಿಂತನೆ, ದೇಶಹಿತಆರ್‌ಎಸ್‌ಎಸ್ ಅಂದ್ರೆ ಸಾಕು ರಾಷ್ಟ್ರೀಯ ಸ್ವಯಂಸೇವಕ ಸಂಘ ಎನ್ನುವ ಮಟ್ಟಿಗೆ ಚಿರಪರಿಚಿತ. ರಾಷ್ಟ್ರಭಾವ ಜಾಗೃತಗೊಳಿಸುತ್ತಿರುವ ಆರ್‌ಎಸ್‌ಎಸ್‌ಗೆ 100 ವರ್ಷ ಸಂಭ್ರಮ ಮನ ಮನೆಗಳನ್ನು ಬೆಸೆದುಕೊಳ್ಳುತ್ತಿರುವ ಸಂಘ ಚಿಂತನೆ ವ್ಯಾಪಿಸಿದ ಮತ್ತು ವ್ಯಾಪಿಸುತ್ತಿರುವ ರೀತಿ ಅನನ್ಯ ಎಂದು ವಿಜಯನಗರ ಜಿಲ್ಲಾ ಬಿಜೆಪಿ ಮುಖಂಡ ಎಂ.ಬಿ.ಬಸವರಾಜ ಹೇಳಿದರು. 

ಪತ್ರಿಕಾ ಹೇಳಿಕೆ ನೀಡಿದ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ ಎಸ್ ಎಸ್) ಭಾರತದ ಹಾಗು ವಿಶ್ವದ ಅತಿ ದೊಡ್ಡ ಸ್ವಯಂಸೇವ ಸಂಘಟನೆ. ಸೆಪ್ಟೆಂಬರ್ 27, 1925ರ ವಿಜಯದಶಮಿಯ ದಿನ ಮಹಾರಾಷ್ಟ್ರ ರಾಜ್ಯದ ನಾಗಪುರದಲ್ಲಿ ಡಾ. ಕೇಶವ ಬಲಿರಾಂ ಹೆಡಗೆವಾರ್ ಈ ಸಂಘಟನೆಯನ್ನು ಹುಟ್ಟುಹಾಕಿದರು. ಹಿಂದೂ ರಾಷ್ಟ್ರೀಯವಾದ ಬಲಪಂಥೀಯ ಸಂಘಟನೆಯೆಂದು ಸಾಮಾನ್ಯವಾಗಿ ಪರಿಗಣಿಸಲ್ಪಡುವ ಈ ಸಂಸ್ಥೆ ಭಾರತದ ನಾಗಪುರದಲ್ಲಿ ತನ್ನ ಮುಖ್ಯ ಕಾರ್ಯಾಲಯ ಹೊಂದಿದೆ.  

ಹಿಂದೂ ಸಂಘಟನೆ ಮತ್ತು ಐಕ್ಯತೆಯನ್ನು ತನ್ನ ಗುರಿಯನ್ನಾಗಿ ಹೊಂದಿರುವ ಈ ಸಂಸ್ಥೆಗೆ ಹೊಂದಿಕೊಂಡಿರುವ ಇತರ ಸಂಸ್ಥೆಗಳನ್ನು ಒಟ್ಟಾಗಿ ಸೇರಿ"ಸಂಘ ಪರಿವಾರ" , ಈಚೆಗೆ  ರಾಜ್ಯದ ಕಾಂಗ್ರೆಸ್ ನಾಯಕರಿಗೆ   ಭಯ ಹುಟ್ಟಿದ್ದು, ಸಂಘಟನೆಗೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದು,ಮುಂದಿನ ದಿನಗಳಲ್ಲಿ ತಕ್ಕ ಪಾಠವನ್ನು ಮತದಾರರು ಕಲಿಸಲಿದ್ದಾರೆ ಎಂದು ಎಂ.ಬಿ.ಬಸವರಾಜ ಕಾಂಗ್ರೆಸ್ ಮುಖಂಡರ ವಿರುದ್ಧ ಆಕ್ರೋಶ. ವ್ಯಕ್ತಪಡಿಸಿದರು.