ನನಗೆ ಯಾವುದೇ ಬಂಧನದ ಭೀತಿಯಿಲ್ಲ: ಶಾಸಕ ರಾಜೀವ್
ಚಿಕ್ಕೋಡಿ 08: ನನಗೆ ಯಾವುದೇ ಬಂಧನದ ಭೀತಿಯಿಲ್ಲ ಎಂದು ಕುಡಚಿ ಶಾಸಕ ಪಿ.ರಾಜೀವ್ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ.
ಮಾಜಿ ಶಾಸಕ ಶ್ಯಾಮ ಘಾಟಗೆ ಮನೆಗೆ ಹೋಗಿ ಧಮ್ಕಿ ಹಾಕಿದ ಆರೋಪ ಪ್ರಕರಣ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಹಾಜರಾಗದ ಕಾರಣ ಮೀಸಲು ಕ್ಷೇತ್ರದ ಬಿಜೆಪಿ ಶಾಸಕ ಪಿ.ರಾಜೀವ್ ಕುಡಚಿ ವಿರುದ್ಧ ವಾರೆಂಟ್ ಜಾರಿಮಾಡಿದ ಹಿನ್ನೆಲೆಯಲ್ಲಿ ಶಾಸಕರು ಇಂದು ಸ್ಪಷ್ಟನೆ ನೀಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತ ನಾಡಿದ ಅವರು, ಕೆಲವು ಮಾಧ್ಯಮಗಳು ಬಂಧನ ಭೀತಿ ಇದೆ ಎಂಬ ಸುಳ್ಳು ಸುದ್ದಿ ಪ್ರಸಾರ ಮಾಡುತ್ತಿದ್ದು, ಇದನ್ನು ನೊಡಿ ನನಗೆ ಆಶ್ಚರ್ಯ ಆಗಿದೆ. ಸ್ವಾತಂತ್ರ್ಯ ಭಾರತದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ರಚಿಸಿರುವ ಸಂವಿಧಾನದ ಅಡಿಯಲ್ಲಿ ಅಮಾಯಕ, ನಿರಪರಾಧಿಗೆ ಯಾವ ಬಂಧನದ ಭೀತಿ ಇರುತ್ತೆ? ನನಗೆ ಯಾವ ಬಂಧನ ಬೀತಿಯಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ. ಪೊಲೀಸರು ಸರಿಯಾದ ತನಿಖೆ ಮಾಡದೆ ಸುಳ್ಳು ಜಾಜರ್್ ಶೀಟ್ ಹಾಕಿರುವುದರಿಂದ ಗೊಂದಲವುಂಟಾಗಿದೆ ಎಂದಿದ್ದಾರೆ.
ನನ್ನ ಪತ್ನಿಗೆ ಆರೋಗ್ಯ ಸರಿಯಿಲ್ಲದ ಕಾರಣದಿಂದಾಗಿ ನಾನು ಆಸ್ಪತ್ರೆಗೆ ಬಂದಿದ್ದು, ನನಗೆ ಯಾವುದೇ ಬಂಧನದ ಭೀತಿಯಿಲ್ಲ ಎಂದು ಪಿ.ರಾಜೀವ್ ಸ್ಪಷ್ಟನೆ ನೀಡಿದ್ದಾರೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 