ಮತ ಹಾಕಿದ ಎಲ್ಲ ಸಮಾಜದ ಕೆಲಸ ಮಾಡಿ ಋಣ ತೀರಿಸುತ್ತೇನೆ: ಶಾಸಕ ಪಠಾಣ
I will repay the debt by working for all the people who voted for me: MLA Pathana
ಮತ ಹಾಕಿದ ಎಲ್ಲ ಸಮಾಜದ ಕೆಲಸ ಮಾಡಿ ಋಣ ತೀರಿಸುತ್ತೇನೆ: ಶಾಸಕ ಪಠಾಣ
ಶಿಗ್ಗಾವಿ 09 : ಕ್ಷೇತ್ರದ ದೇವಸ್ಥಾನಗಳನ್ನು ಅಭಿವೃದ್ಧಿ ಪಡಿಸುವ ಅವಕಾಶ ಸಿಕ್ಕಿದ್ದು ನನ್ನ ಸೌಭಾಗ್ಯ ಎಂದು ಭಾವಿಸಿ 50 ಕೋಟಿ ವೆಚ್ಚದಲ್ಲಿ ವಿವಿಧ ದೇವಸ್ಥಾನಗಳ ಜೀರ್ಣೋದ್ದಾರ ಕಾಮಗಾರಿಗೆ ಚಾಲನೆ ನೀಡಿದ್ದಾಗಿ ಶಾಸಕ ಯಾಸೀರಖಾನ್ ಪಠಾಣ ತಿಳಿಸಿದರು.ಬಂಕಾಪೂರ ಪಟ್ಟಣದ ಸಿಂಪಿಗಲ್ಲಿಯ ವಿಠಲ-ರುಕ್ಷೀಣಿ ದೇವಸ್ಥಾನದ ಜೀರ್ಣೋ ದ್ವಾರ, ಶ್ರೀಭಾವಸಾರ ಸಮುದಾಯ ಭವನದ 50 ಲಕ್ಷ ವೆಚ್ಚದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಉಪ ಚುನಾವಣೆಯಲ್ಲಿ ನನ್ನ ಗೆಲುವಿಗೆ ಆಶೀರ್ವದಿಸಿದ ಕ್ಷೇತ್ರದ ದೇವರು ಸ್ಮರಿಸಿ ದೇವಸ್ಥಾನ ಅಭಿವೃದ್ಧಿ, ಜತೆಗೆ ಮತ ಹಾಕಿದ ಎಲ್ಲ ಸಮಾಜಗಳ ಜನರ ಕೆಲಸ ಮಾಡಿ, ಋಣ ತೀರಿಸುವ ಕೆಲಸ ಮಾಡುತ್ತಿದ್ದೇನೆ ಎಂದರು.
ಒಂದು ಸಾವಿರ ದೇವಸ್ಥಾನಗಳ ಅಭಿವೃದ್ಧಿಗೆ ಅರ್ಜಿ ಬಂದಿವೆ. ಈಗಾಗಲೇ 500 ಸಭಾ ಭವನ, ಬೀರಲಿಂಗೇಶ್ವರ, ವಿಠಲ-ರುಕ್ಷೀಣಿ, ಆಂಜನೇಯ, ಉಡಚುದೇವಿ ಸಮುದಾಯ ಭವನ ನಿರ್ಮಾಣಕ್ಕೆ 50 ಲಕ್ಷ, ಸವಣೂರಿನ ಖಂಡೋಭಾ ದೇವಸ್ಥಾನ ಅಭಿವೃದ್ಧಿಗೆ 50 ಲಕ್ಷ ಡಾ.ಅಂಬೇಡ್ಕರ್ ಸಮುದಾಯ ಭವನ, ಚಾಮುಂಡೇಶ್ವರಿ ದೇವ ಸ್ಥಾನದ ಅಭಿವೃದ್ಧಿಗೆ ತಲಾ 25 ಲಕ್ಷ ಸೇರಿದಂತೆ ಕ್ಷೇತ್ರದ ದೇವಸ್ಥಾನಗಳ ಅಭಿವೃದ್ಧಿಗೆ 50 ದೇವಸ್ಥಾನಗಳಿಗೆ ಅನುದಾನ ನೀಡಿದ್ದೇನೆ. ಉಳಿದಂತೆ ಎಲ್ಲ ದೇವಸ್ಥಾನಗಳ ಅಭಿವೃದ್ಧಿಗೆ ಹಂತ, ಹಂತವಾಗಿ ಹಣ ನೀಡಲು ನಿರ್ಣಯಿಸಿದ್ದೇನೆ. ಮರಾಠ ಜನರ ಋಣ ನನ್ನ ಮೇಲಿದೆ, ನಿಮ್ಮ ಸೇವೆ ಮಾಡುತ್ತೇನೆ ಎಂದು ಹೇಳಿದ ಶಾಸಕರು, ತಾಲೂಕು ಮಟ್ಟದಲ್ಲಿ ಸಭಾ ಭವನ ನಿರ್ಮಿಸುವ ಭರವಸೆ ನೀಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 