ಅಸ್ಸಾಂನಲ್ಲಿ ಐಸಿಸ್ ಪ್ರೇರಿತ ಉಗ್ರರ ಸೆರೆ, ತಪ್ಪಿದ ಅನಾಹುತ
isis
ನವದೆಹಲಿ, ನವೆಂಬರ್ 25: ದೆಹಲಿ ಪೊಲೀಸರು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಅಸ್ಸಾಂ , ಮತ್ತು ದೆಹಲಿಯಲ್ಲಿ ದಾಳಿ ನಡೆಸುವ ಸಂಚು ಮಾಡಿದ್ದ ಐಸಿಸ್ ನಿಂದ ಪ್ರಭಾವಿರಾಗಿದ್ದ ಮೂವರು ಉಗ್ರರನ್ನು ಅಸ್ಸಾಂನಲ್ಲಿ ಬಂಧಿಸಲಾಗಿದೆ.
ಬಂಧಿತ ಉಗ್ರರಿಂದ ಸುಧಾರಿತ ಸ್ಫೋಟಕ ವಸ್ತು(ಐಇಡಿ) ಹಾಗೂ ನಿಷೇಧಿತ ಸಾಹಿತ್ಯ ಹಾಗೂ ಇನ್ನಿತರ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು ಈ ಮೂಲಕ ಭಾರೀ ಅನಾಹುತ ತಪ್ಪಿಸಿದಂತಾಗಿದೆ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಪೊಲೀಸ್ ಮಾಹಿತಿ ಪ್ರಕಾರ, ಬಂಧಿತರು ಐಸಿಸ್ ನಿಂದ ಪ್ರಭಾವಿರಾಗಿದ್ದು, ಅಸ್ಸಾಂನ ರಾಮ್ ಮೇಳದಲ್ಲಿ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸಿರುವುದಾಗಿ ತಿಳಿದು ಬಂದಿದೆ ಅಸ್ಸಾಂ ನಂತರ ದೆಹಲಿಯಲ್ಲಿ ದಾಳಿ ನಡೆಸುವ ಉದ್ದೇಶ ಹೊಂದಿರುವ ವಿಚಾರವೂ ಬೆಳಕಿಗೆ ಬಂದಿದೆ ಎನ್ನಲಾಗಿದೆ.
ಈ ಘಟನೆಯನ್ನು ದೆಹಲಿ ಪೊಲೀಸ್ ಸ್ಪೆಷಲ್ ಸೆಲ್ ನ ಡಿಸಿಪಿ ಪ್ರಮೋದ್ ಕುಶ್ವಾಹಾ ಅವರು ಖಚಿತಪಡಿಸಿದ್ದು, ಐಇಡಿ ಸ್ಫೋಟಕದ ಜತೆ ಮೂವರು ಉಗ್ರರನ್ನು ಬಂಧಿಸಿದ್ದರಿಂದ ಉಗ್ರರ ದಾಳಿ ಸಂಚು ವಿಫಲಗೊಳಿಸಿದಂತಾಗಿದೆ ಎಂದೂ ಹೇಳಿದ್ದಾರೆ.
ಅಸ್ಸಾಂನ ಗೋಲಾಪಾರಾ ನಿವಾಸಿಗಳಾದ ರಂಜಿತ್ ಅಲಿ, ಇಸ್ಲಾಂ ಹಾಗೂ ಜಮಾಲ್ ಸೇರಿ ಮೂವರನ್ನು ಬಂಧಿಸಲಾಗಿದೆ. ಮೂವರು ದೆಹಲಿಯಲ್ಲಿ ಕೆಲವರ ಜತೆ ಸಂಪರ್ಕದಲ್ಲಿದ್ದರು. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಸಂಪರ್ಕ ಹೊಂದಿರುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 