ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿದರೆ ಉತ್ತಮ ಪ್ರಜೆಯಾಗಲು ಸಾಧ್ಯ
If children's talents are recognized and encouraged, they can become good citizens
ಕಂಪ್ಲಿ 08 : ಮಕ್ಕಳಿಗೆ ಉನ್ನತ ವಿದ್ಯಾಭ್ಯಾಸ ನೀಡುವ ಜತೆಗೆ ಸಂಸ್ಕೃತಿ, ಸಂಸ್ಕಾರ ಕಲಿಸಿದಲ್ಲಿ ಅವರ ಭವಿಷ್ಯದ ಜೀವನ ಉತ್ತಮವಾಗಿರುತ್ತದೆ ಎಂದು ಶಾಸಕ ಜೆ.ಎನ್.ಗಣೇಶ್ ಹೇಳಿದರು. ಪಟ್ಟಣದ ಸಣಾಪುರ ರಸ್ತೆಯಲ್ಲಿರುವ ಕೆಸಿಬಿ ಎಜ್ಯುಕೇಷನ್ ಟ್ರಸ್ಟ್ನ ರೈನ್ಬೋ ಗ್ಲೋಬಲ್ ಸ್ಕೂಲ್ ಮತ್ತು ಪಿಯು ಕಾಲೇಜು ನೇತೃತ್ವದಲ್ಲಿ ಶನಿವಾರ ಸಂಜೆ ಆಯೋಜಿಸಿದ್ದ ಏಳು ಬಣ್ಣಗಳ ಉತ್ಸವ ಹಾಗೂ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿ, ಸ್ಪರ್ಧಾ ಜಗತ್ತಿನಲ್ಲಿ ಪರಿಶ್ರಮದೊಂದಿಗೆ ಮುನ್ನೆಡೆದರೆ ಗುರಿ ಮುಟ್ಟಲು ಸಾಧ್ಯ. ಮಕ್ಕಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿದರೆ, ನಾಡಿನಲ್ಲಿ ಉತ್ತಮ ಪ್ರಜೆಗಳಾಗಿ ಹೊರ ಹೊಮ್ಮಲು ಸಾಧ್ಯ ಎಂದರು.
ಖಾಸಗಿ ಶಾಲೆಗಳ ಜಿಲ್ಲಾಧ್ಯಕ್ಷ ಮರಿಸ್ವಾಮಿರೆಡ್ಡಿ ಮಾತನಾಡಿ, ಆಧುನಿಕ ಯುಗದಲ್ಲಿ ಉನ್ನತ ವ್ಯಾಸಂಗ ಮಾಡಿದ ಮಕ್ಕಳು ಒಳ್ಳೆಯ ಭವಿಷ್ಯ ರೂಪಿಸಿಕೊಳ್ಳಲಿದ್ದಾರೆ. ಉತ್ತಮ ವಿದ್ಯಾಭ್ಯಾಸದ ಜತೆಗೆ ನಮ್ಮ ಸಂಸ್ಕೃತಿ, ಮೌಲ್ಯಯುತ ಶಿಕ್ಷಣವನ್ನು ಪೋಷಕರು ನೀಡಬೇಕು. ಕಂಪ್ಲಿ ಪಟ್ಟಣ ಹಾಗೂ ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಕೆ.ಎಸ್.ಚಾಂದ್ಭಾಷಾ ಇವರು ಇಲ್ಲಿ ರೈಬೋ ಶಾಲೆ ಪ್ರಾರಂಭಿಸಿದ್ದಾರೆ. ಇಲ್ಲಿನ ಶಾಲೆಯಲ್ಲಿ ಹೆಚ್ಚು ಹೆಚ್ಚಕ್ಕೂ ಪ್ರವೇಶಾತಿ ಪಡೆಯಲು ಪೋಷಕರು ಸಹಕರಿಸಬೇಕು. ಮಗುವಿನ ಶಿಕ್ಷಣ ಮತ್ತು ಮೌಲ್ಯ ವೃದ್ಧಿಯಲ್ಲಿ ಪೋಷಕರ ಪಾತ್ರವೂ ಮುಖ್ಯವಾಗಿದೆ ಎಂದರು.
ಕೆಸಿಬಿ ಎಜ್ಯುಕೇಷನ್ ಟ್ರಸ್ಟ್ ಕಾರ್ಯದರ್ಶಿ ಕೆ.ಎಸ್.ಚಾಂದ್ಭಾಷಾ ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿ, ಒಂದು ಶಾಲೆ ಎಂದರೆ ಅಲ್ಲಿ ಮಕ್ಕಳ ಸುರಕ್ಷತೆ ಮತ್ತು ಸರ್ವತೋಮುಖ ಪ್ರಗತಿ ಬಹಳ ಮುಖ್ಯ. ಇವೆರಡೂ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಸುರಕ್ಷತೆಯೊಂದಿಗೆ ಪ್ರಗತಿ ಹಾಗೂ ಪೋಷಕರ ಸಕ್ರಿಯ ಪಾಲ್ಗೊಳ್ಳುವಿಕೆಗೆ ಹೆಚ್ಚಿನ ಆಧ್ಯತೆ ನೀಡುವ ಜೊತೆಗೆ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ರೈನ್ಬೋ ಸಂಸ್ಥೆಯು ನೀಡುತ್ತಿದೆ. ಒಂದು ಶಾಲೆ ಆಶಾಕಿರಣವಾಗಿ ಹೊರಹೊಮ್ಮುಲು ಶಿಕ್ಷಕರ, ಪೋಷಕರು, ಶಿಕ್ಷಣ ಪ್ರೇಮಿಗಳ ಸಹಕಾರ ಅತಿ ಅವಶ್ಯಕವಾಗಿದೆ. ಕೆಸಿಬಿ ಎಜ್ಯುಕೇಷನ್ ಟ್ರಸ್ಟ್ ರೈನ್ಬೋ ಶಾಲೆಯ ಮಕ್ಕಳ ಶಿಕ್ಷಣದ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಹೆಚ್ಚಿನ ಆಧ್ಯತೆ ನೀಡುತ್ತಾ ಬಂದಿದೆ. ಇದರಿಂದ ಮಕ್ಕಳು ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚಿನ ಅಂಕಗಳೊಂದಿಗೆ ಸಾಧನೆ ಮಾಡುತ್ತಿದ್ದಾರೆ. ಶಾಲೆಯು ಇನ್ನಷ್ಟು ಎತ್ತರಕ್ಕೆ ಬೆಳೆಯಲು ಪ್ರತಿಯೊಬ್ಬರು ಸಹಕರಿಸಬೇಕು ಎಂದರು.
ಪ್ರಾಂಶುಪಾಲ ಅಜೀಜ್ ಉಲ್ ಹಕ್ ಡಿ.ಕೆ ಇವರು ಪ್ರಾಸ್ತಾವಿಕವಾಗಿ ಮಾತನಾಡಿ, ಶಾಲೆಯ ಪ್ರಗತಿ ಹಾಗೂ ಶಿಕ್ಷಣ ಬಗ್ಗೆ ವರದಿ ಮಂಡಿಸಿದರು. ಇಲ್ಲಿನ ಸಮಾರಂಭವನ್ನು ಗಣ್ಯರು ಉದ್ಘಾಟಿಸಿದರು. ನಂತರ ಪ್ರತಿಭಾವಂತ ಮಕ್ಕಳಿಗೆ ಹಾಗೂ ಸಾಧಕರಿಗೆ ಮತ್ತು ಗಣ್ಯರಿಗೆ ಸನ್ಮಾನಿಸಿ ಗೌರವಿಸಲಾಯಿತು. ಚಿತ್ರಕಲಾವಿದ ಶಿವುಕುಮಾರ ಇವರು ಸಂಸ್ಥೆಯ ಕಾರ್ಯದರ್ಶಿ ಚಾಂದ್ಭಾಷಾ ಅವರ ಭಾವಚಿತ್ರವನ್ನು ಅದ್ಭುತವಾಗಿ ಬಿಡಿಸುವ ಮೂಲಕ ಎಲ್ಲರ ಗಮನ ಸೆಳೆದರು. ತದನಂತರ ಮಕ್ಕಳ ಭರತನಾಟ್ಯ, ನೃತ್ಯ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳು ವರ್ಣರಂಜಿತವಾಗಿ ಮೂಡಿ ಬಂದವು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಶಾರುಖ್ ಕೆ.ಎಸ್, ಖಜಾಂಚಿ ಕೆ.ಎಸ್.ಮೆಹಬೂಬ್ ಭಾಷಾ, ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಪಿ.ಮೂಕಯ್ಯಸ್ವಾಮಿ, ಎಪಿಎಂಸಿ ಅಧ್ಯಕ್ಷ ಹಬೀಬ್ ರೆಹಮಾನ್, ಜೆಸ್ಕಾಂ ಎಇಇ ಶ್ರೀನಿವಾಸ, ಮಾಜಿ ಪುರಸಭೆ ಅಧ್ಯಕ್ಷ ಭಟ್ಟ ಪ್ರಸಾದ್, ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಉಸ್ಮಾನ್, ಮುಖಂಡರಾದ ಬಿ.ನಾರಾಯಣಪ್ಪ, ಪಿ.ನಾಗೇಶ್ವರರಾವ್, ಬಿ.ಸಿದ್ದಪ್ಪ, ಕೋನಂಕಿ ಬಾಲಕೃಷ್ಣ, ರಂಜಾನ್, ಸೈಯದ್ ಉಸ್ಮಾನ್, ಶಿವರಾಜ, ಜಾಫರ್, ಎಂ.ಸುಧೀರ್, ಹೊನ್ನಳ್ಳಿ ಗಂಗಾಧರ, ಮಣ್ಣೂರು ಕರಿಯಪ್ಪ, ಬಡಿಗೇರ ಜಿಲಾನಸಾಬ್, ಶ್ರೀನಿವಾಸ, ಗುರುರಾಜ, ಕೊಟ್ರೇಶ, ಮೆಟ್ರಿ ಕುಮಾರ, ಬಸವರಾಜ ಸೇರಿದಂತೆ ಪೋಷಕರು, ಶಿಕ್ಷಕ ವೃಂದದವರು, ಮಕ್ಕಳು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 