ಪಕ್ಷದ ಶಾಸಕರು ಮತ್ತು ಸಂಸದರ ಕಾರ್ಯಕ್ಷಮತೆ ಸರಿಯಿಲ್ಲದಿದ್ದರೆ ಅದಕ್ಕೆ ಪಕ್ಷದ ಮುಖ್ಯಸ್ಥರೇ ಹೊಣೆ
ನವದೆಹಲಿ: ಸಂಸದರು, ಶಾಸಕರ ಕಾರ್ಯಕ್ಷಮತೆ ಸರಿ ಇಲ್ಲದಿದ್ದರೆ ಪಕ್ಷದ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿ ಮಾಡಬೇಕು ಎಂದು ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಹೇಳುವ ಮೂಲಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.
ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋತ ನಂತರ ಪಕ್ಷದ ನಾಯಕತ್ವ ವಿರುದ್ಧ ತೀಕ್ಷ್ಣವಾಗಿ ಟೀಕೆ ಮಾಡಿದ ನಿತಿನ್ ಗಡ್ಕರಿ ತಮ್ಮ ಹೇಳಿಕೆಯನ್ನು ಸಮಥರ್ಿಸಿಕೊಂಡಿದ್ದಾರೆ.
ಗೃಹ ಸಚಿವಾಲಯದ ಯಶಸ್ಸಿಗೆ ತರಬೇತಿ ಹಾಗೂ ಕೌಶಲಯುತ ಐಎಎಸ್ , ಐಪಿಎಸ್ ಅಧಿಕಾರಿಗಳು ಪ್ರಮುಖ ಕಾರಣ. ಈ ಎಲ್ಲಾ ಅಧಿಕಾರಿಗಳು ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಆದರೆ, ನಾನು ಪಕ್ಷದ ಅಧ್ಯಕ್ಷನಾಗಿದ್ದುಕೊಂಡು ಸಂಸದರು, ಶಾಸಕರು ಸರಿಯಾಗಿ ಕೆಲಸ ಮಾಡದಿದ್ದರೆ ಯಾರು ಜವಾಬ್ದಾರರಾಗಬೇಕಾಗುತ್ತದೆ? ಎಂದು ನಿತಿನ್ ಗಡ್ಕರಿ ಪ್ರಶ್ನಿಸಿದ್ದಾರೆ.
ಮಧ್ಯಪ್ರದೇಶ, ರಾಜಸ್ತಾನ, ಹಾಗೂ ಛತ್ತೀಸ್ ಗಡ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಸೋತ ಕೆಲವು ವಾರಗಳ ಬಳಿಕ ನಿತಿನ್ ಗಡ್ಕರಿ ಪಕ್ಷದ ನಾಯಕತ್ವವನ್ನು ಪ್ರಶ್ನಿಸಿದ್ದರು.
ಚುನಾವಣೆಯಲ್ಲಿ ಸೋತರೆ ಪಕ್ಷದ ನಾಯಕರೇ ಜವಾಬ್ದಾರಿ ಹೊರಬೇಕಾಗುತ್ತದೆ. ಸೋಲಿನ ಹೊಣೆ ಹೊರುವುದೂ ಸಹ ನಾಯಕತ್ವದ ಭಾಗವಾಗಿರಬೇಕು ಎಂದು ಅವರು ಹೇಳಿಕೆ ನೀಡಿದ್ದರು.
ಆದಾಗ್ಯೂ, ಈ ಬಗ್ಗೆ ಕೆಲ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಇಲ್ಲಸಲ್ಲದ ಮಾಹಿತಿ ಹರಡುವ ಮೂಲಕ ಪಕ್ಷ ಮತ್ತು ತಮ್ಮ ನಡುವೆ ಭಿನ್ನಾಭಿಪ್ರಾಯ ಮೂಡಿಸಲು ಯತ್ನ ನಡೆಸಲಾಗುತ್ತಿದೆ ಎಂದು ತಮ್ಮ ಬ್ಲಾಗ್ ನಲ್ಲಿ ನಿತಿನ್ ಗಡ್ಕರಿ ಬರೆದುಕೊಂಡಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 