ಮಹಿಳೆ ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿ: ಆಶಾ ಪರೀಟ
If women develop, the country develops: Asha Parita
ಯರಗಟ್ಟಿ, 01 : ‘ಮಹಿಳೆಯರ ಸ್ವಾಭಿಮಾನ ಎತ್ತಿಹಿಡಿದು, ಆರ್ಥಿಕ ಸ್ವಾವಲಂಬನೆ ಮಾಡಲು ನನಗೆ ಅವಕಾಶ ಸಿಕ್ಕಿದೆ. ಮಹಿಳೆ ಅಭಿವೃದ್ಧಿಯಾದರೆ ಮನೆ, ಗ್ರಾಮ, ದೇಶ ಅಭಿವೃದ್ಧಿಯಾದಂತೆ’ ಎಂದು ವಸತಿ ನಿಲಯ ಪಾಲಕರಾದ ಆಶಾ ಪರೀಟ ಹೇಳಿದರು.ಪಟ್ಟಣದ ಮಹಾಂತ ದುಂರದುಡೇಶ್ವರ ಶ್ರೀಮಠದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ನಡೆದ ಮಹಿಳಾ ಸಾಧನಾ ಸಮಾವೇಶ ಹಾಗೂ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದ ಅವರು, ‘ಮಹಿಳೆಯರನ್ನು ಸ್ವಾವಲಂಬಿಯಾಗಿಸಲು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಮಾದರಿ ಕೆಲಸ ಮಾಡುತ್ತಿದ್ದಾರೆ’ ಎಂದರು.
ಸರಕಾರ ಈಗ ‘ಒಳ್ಳೆಯ ಉದ್ದೇಶದಿಂದ ಗೃಹಲಕ್ಷ್ಮೀ ಗ್ಯಾರಂಟಿ ಬ್ಯಾಂಕ್ ಆರಂಭಿಸಲಾಗುತ್ತಿದೆ. ಪ್ರತಿಯೊಬ್ಬರೂ ಶೇರ್ ಪಡೆಯಬೇಕು. ಅದರಿಂದ ಸಾಲ ನೀಡಲಾಗುವುದು. ಇದಕ್ಕೆ ಧರ್ಮಸ್ಥಳ ಸಂಘವೇ ಆದರ್ಶ, ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಾಗುವುದು. ಜೊತೆಗೆ ಶಿಕ್ಷಣ, ಉದ್ಯೋಗಕ್ಕಾಗಿ ಸಾಲ ನೀಡುವ ವ್ಯವಸ್ಥೆ ಇರಲಿದೆ’ಎಂದು ಉದ್ಘಾಟಕರಾದ ಶಿವಾನಂದ ಬಳಿಗಾರ ಹೇಳಿದರು.
‘ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದವರು ಮಹಿಳೆಯರಿಗೆ ಜ್ಞಾನ ನೀಡುವ ಮೂಲಕ ಅದನ್ನು ಇಡೀ ಸಮಾಜಕ್ಕೆ ವಿಸ್ತರಿಸುವ ಕಾರ್ಯವನ್ನು ಮಾಡುತ್ತಿದ್ದಾರೆ. ಮಹಿಳೆಯರು ಜ್ಞಾನವನ್ನು ಪಡೆದು ತಮ್ಮ ಮಕ್ಕಳಿಗೆ ಅದನ್ನು ನೀಡುವ ಮೂಲಕ ಇಡೀ ಸಮಾಜಕ್ಕೆ ಜ್ಞಾನವನ್ನು ವಿಸ್ತಾರ ಮಾಡುವಂತಹ ಕೆಲಸವನ್ನು ಮಾಡುತ್ತಾರೆ’ ಎಂದು ಹೇಳಿದರು.ಸಂಪನ್ಮೂಲ ವ್ಯಕ್ತಿಯಾದ ಡಾ. ನಿರ್ಮಲಾ ಬಟ್ಟಲ, ತಾಲೂಕಾ ಯೋಜನಾಧಿಕಾರಿ ಶ್ರೀಕಾಂತ ಎಂ. ಸುಧಾರಾಣಿ ಕರಗೂಳಿ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ನಿಶಾ, ಸಂಘದ ಮೇಲವಿಚಾರಕ ನಾಗರಾಜ ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಪದಾಧಿಕಾರಿಗಳು, ನೂರಾರು ಮಹಿಳೆಯರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 