ಧಾಮರ್ಿಕ ಸಂಸ್ಕಾರ ಹೊಂದಿದರೆ ಉತ್ತಮ ಜೀವನ ಸಾಧ್ಯ: ಮುನವಳ್ಳಿ
ಲೋಕದರ್ಶನ ವರದಿ
ಗಂಗಾವತಿ 21: ಪ್ರತಿಯೊಬ್ಬರು ಧಾಮರ್ಿಕ ಸಂಸ್ಕಾರ ಹೊಂದಿದರೆ ಉತ್ತಮ ತೆರನಾಗಿ ಜೀವನ ನಿರ್ವಹಣೆ ಮಾಡಲು ಸಾಧ್ಯ ಎಂದು ಶಾಸಕ ಪರಣ್ಣ ಮುನವಳ್ಳಿ ತಿಳಿಸಿದರು.
ಜಯನಗರದಲ್ಲಿನ ಗಂಗಾಧರೇಶ್ವರ ಸಮುದಾಯಭವನ ಉದ್ಘಾಟಿಸಿ ಬುಧವಾರ ಅವರು ಮಾತನಾಡಿದರು. ನಮ್ಮ ದೇಶ ಸನಾತನ ಸಂಸ್ಕೃತಿಯನ್ನು ಹೊಂದಿದೆ. ಧರ್ಮವನ್ನು ನಾವು ರಕ್ಷಿಸಿದರೆ ಧರ್ಮ ನಮ್ಮನ್ನು ರಕ್ಷಿಸುತ್ತದೆ. 12ನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿ ಮಾಡಿರುವ ಬಸವಣ್ಣನವರು ಕಾಯಕವೇ ಕೈಲಾಸ ಎಂದು ಸಾರಿ ಹೇಳಿದ್ದರು. ದೇವರನ್ನು ನಾವು ನಮ್ಮ ವೃತ್ತಿಯಲ್ಲಿ ಕಾಣಲು ಸಾಧ್ಯ ಎಂದು ತಿಳಿಸಿದರು.
ಗಂಗಾಧರೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಪದಾಧಿಕಾರಿಗಳು ಉತ್ತಮವಾಗಿ ನಿರ್ವಹಣೆ ಮಾಡುತ್ತಿದ್ದಾರೆ. ಈ ಸಮುದಾಯಭವನವನ್ನು ಕಡಿಮೆ ವೆಚ್ಚದಲ್ಲಿ ವಿವಾಹ ಮತ್ತು ಇತರ ಸಮಾರಂಭಗಳಿಗೆ ಬಾಡಿಗೆ ನೀಡಬೇಕು. ಎಲ್ಲ ವರ್ಗಗಳ ಜನರಿಗೆ ಇದರ ಪ್ರಯೋಜನ ತಲುಪಬೇಕು ಎಂದು ಮುನವಳ್ಳಿ ತಿಳಿಸಿದರು.
ಹೆಬ್ಬಾಳ ನಾಗಭೂಷಣ ಶಿವಾಚಾರ್ಯರು, ಸೂಳೆಕಲ್ ಭುವನೇಶ್ವರಯ್ಯ ತಾತನವರು ಸಾನಿಧ್ಯವಹಿಸಿ ಆಶೀರ್ವಚನ ನೀಡಿದರು. ಮಾಜಿ ಸಚಿವ ಎಂ.ಮಲ್ಲಿಕಾಜರ್ುನನಾಗಪ್ಪ, ಮಾಜಿ ಶಾಸಕ ಜಿ.ವೀರಪ್ಪ, ಮಾಜಿ ಸಂಸದ ಶಿವರಾಮೇಗೌಡ, ತಿಪ್ಪೇರುದ್ರಸ್ವಾಮಿ ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 