ಅಕ್ರಮ ಗಾಂಜಾ ಮಾರಾಟ: ವ್ಯಕ್ತಿಯ ಬಂಧನ
ಕೊಪ್ಪಳ 19: ಕೊಪ್ಪಳ ಅಬಕಾರಿ ಉಪ ಅಧೀಕ್ಷಕರ ನೇತೃತ್ವದ ತಂಡವು ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ ವ್ಯಕ್ತಿಯನ್ನ ಬಂಧಿಸಿದೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ವಿರೂಪಾಪುರ ಗಡ್ಡಿಯಿಂದ ಸಾಣಾಪುರ ಗ್ರಾಮಕ್ಕೆ ಹೋಗುವ ರಸ್ತೆ ಬದಿಯಲ್ಲಿ (ಸಾಣಾಪುರ ಗ್ರಾಮದ ಹತ್ತಿರ ಇರುವ) ನಯನ ಫಾಸ್ಟ್ ಫುಡ್ ಹೋಟಲ್ ಎದುರುಗಡೆಯ ಜಾಗೆಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ನಿಂಗಪ್ಪ ತಂದೆ ಯರಿಸ್ವಾಮಿ ಹರಗೋಲ (35) ಎಂಬ ವ್ಯಕ್ತಿಯನ್ನು ಕೊಪ್ಪಳ ಅಬಕಾರಿ ಉಪ ಅಧೀಕ್ಷಕರ ನೇತೃತ್ವದ ತಂಡವು ಶುಕ್ರವಾರದಂದು ಬಂಧಿಸಿದೆ. ಅಲ್ಲದೇ ಅಬಕಾರಿ ತಂಡದವರು ಆರೋಪಿತನಿಂದ ಸುಮಾರು 25000 ಮೌಲ್ಯದ 800 ಗ್ರಾಂ. ಗಾಂಜಾವನ್ನ ವಶಡಿಸಿಕೊಂಡಿದ್ದಾರೆ.
ಆರೋಪಿತನ ವಿರುದ್ಧ ಕಲಂ 8(ಬಿ),8(ಸಿ),20(ಬಿ)25,27,28,29 ರಡಿ ಪ್ರಕರಣ ದಾಖಲಿಸಲಾಗಿದೆ. ಅಬಕಾರಿ ಉಪ ಅಧೀಕ್ಷಕ ದೇಮಣ್ಣ, ಜಿಲ್ಲಾ ವಿಚಕ್ಷಣಾದಳ ಅಬಕಾರಿ ನಿರೀಕಕ ಮಹದೇವ ಪೂಜಾರಿ, ಅಬಕಾರಿ ರಕ್ಷಕ ಸಿಬ್ಬಂಧಿಗಳಾದ ಶಿವಪುತ್ರಪ್ಪ, ನಾಗಮುನಿಸ್ವಾಮಿ, ಜಕ್ಕಪ್ಪ, ಟಿ. ಶ್ರೀಧರ, ಹುಸೇನ್ ಬಾಷಾ ಮತ್ತು ಶಿವಾನಂದ ಇದೇ ಸಂದರ್ಭದಲ್ಲಿ ಪಾಲ್ಗೊಂಡಿದ್ದರು.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 