ಮಾದಕ ವಸ್ತುವನ್ನು ಅಕ್ರಮವಾಗಿ ಸಾಗಾಟ, ವ್ಯಕ್ತಿ ಲಾಕ್, 8 ಲಕ್ಷದ ಮೌಲ್ಯದ ಮಾಲು ವಶಕ್ಕೆ
Illegal transportation of narcotics, person arrested, goods worth Rs 8 lakh seized
ಮುಂಡಗೋಡ 21 : ಮುಂಡಗೋಡಿನ ಕೆ,ಎಸ್,ಆರಿ್ಸ, ಬಸ್ ಡಿಪೋ ಹತ್ತಿರ ಚರಸ್ ಎಂಬುವ ಮಾದಕ ವಸ್ತುವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮುಂಡಗೋಡ ಪೋಲಿಸರು ಶುಕ್ರವಾರ ಬಂಧಿಸಿದ್ದಾರೆ. ಬಂಧಿತ ಆರೋಪಿತನಾದ ಪಟ್ಟಣದ ಸುಭಾಷ್ ನಗರದ ಸಚಿನ್ ಟೇಕಬಹುದ್ದೂರ ಗೋರ್ಖಾ (26) ಎಂಬುವವ ಮುಂಡಗೋಡಿನ ಹುಬ್ಬಳ್ಳಿ ರಸ್ತೆಯ ಕೆ,ಎಸ್,ಆರ್, ಟಿ,ಸಿ, ಬಸ್ ಡಿಪೋ ಹತ್ತಿರ ಹಿರೋ ಕಂಪನಿಯ ಕಪ್ಪು ಬಣ್ಣದ ಸ್ಪ್ಲೆಂಡರ್ ಬೈಕ್ ಮೇಲೆ ಚರಸ್ ಮಾದಕ ವಸ್ತುವನ್ನು ಇಟ್ಟುಕೊಂಡು ಸಾಗಾಟ ಮಾಡುತ್ತಿದ್ದಾಗ ಇಲ್ಲಿಯ ಪೋಲಿಸರು ದಾಳಿ ಮಾಡಿ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತನಿಂದ ಸುಮಾರು 8 ಲಕ್ಷ ರೂ.ಬೆಲೆ ಬಾಳುವ 781ಗ್ರಾಂ ತೂಕದ ಚರಸ್ ಹಾಗೂ ಚರಸ್ ಮಾರಾಟಕ್ಕೆ ಬಳಸಿದ ಸ್ಪ್ಲೆಂಡರ್ ಬೈಕ್ ವಶಪಡಿಸಿಕೊಳ್ಳಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಪೋಲಿಸ್ ಅಧೀಕ್ಷಕರು ದೀಪನ್ ಎಮ್.ಎನ್ ಐ.ಪಿ.ಎಸ್ , ಕೃಷ್ಣಮೂರ್ತಿ ಜಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಕಾರವಾರ, ಜಗದೀಶ ನಾಯ್ಕ ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಕಾರವಾರ, ಗೀತಾ ಪಾಟೀಲ ಡಿ.ಎಸ್.ಪಿ ಶಿರಸಿ ರವರ ಮಾರ್ಗದರ್ಶನದಲ್ಲಿ ಅಕ್ರಮ ಚರಸನ್ನು ಸಾಗಾಟ ಮಾಡುವ ಆರೋಪಿತನನ್ನು ಬಂಧಿಸುವಲ್ಲಿ ಮುಂಡಗೋಡ ಸಿ ಪಿ ಐ ರಂಗನಾಥ ನೀಲಮ್ಮನವರ , ಪಿಎಸ್ಐ ಯಲ್ಲಾಲಿಂಗ ಕುನ್ನೂರ , ಹಾಗೂ ಸಿಬ್ಬಂದಿಗಳಾದ ಕೋಟೇಶ್ವರ ನಾಗರವಳ್ಳಿ , ಮಹಾಂತೇಶ ಮುಧೋಳ ,ಅಣ್ಣಪ್ಪ ಬುಡಿಗೇರ , ಶಿವಾನಂದ ದಾನಣ್ಣವರ ,ಅನ್ವರ ಬಮ್ಮಿಗಟ್ಟಿ , ಮುಂಡಗೋಡ ಪೊಲೀಸ್ ಠಾಣೆರವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 