ಬಡ್ತಿ ಮೀಸಲಾತಿ ಕಾಯ್ದೆ ಇಷ್ಟರಲ್ಲೇ ಜಾರಿ: ಸಿಎಂ
ಬೆಂಗಳೂರು 25: ಬಿ.ಕೆ.ಪವಿತ್ರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಸಿ-ಎಸ್ಟಿ ಸಮುದಾಯದ ಹಿತರಕ್ಷಣೆಗೆ 2017ರಲ್ಲಿ ತಿದ್ದುಪಡಿ ಮಾಡಿರುವ ಬಡ್ತಿ ಮೀಸಲಾತಿ ಕಾಯ್ದೆಯನ್ನು ಒಂದೆರಡು ದಿನಗಳಲ್ಲಿ ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದರು.
ಗೃಹ ಕಚೇರಿ ಕೃಷ್ಣಾದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯ ಗಂಭೀರವಾಗಿ ಚಚರ್ೆಯಾಗಿದೆ. ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಮತ್ತು ಸಚಿವ ಪ್ರಿಯಾಂಕ್ ಖಗರ್ೆ ಸಾಕಷ್ಟು ವಿಷಯಗಳನ್ನು ಪ್ರಸ್ತಾಪಿಸಿದ್ದಾರೆ. ಕಾಯ್ದೆ ಜಾರಿ ವಿಳಂಬದಿಂದ ಕೆಲವು ಅಧಿಕಾರಿಗಳಿಗೆ ತೊಂದರೆಯಾಗುತ್ತಿದೆ ಎಂಬ ಅಸಮಾಧಾನವಿದೆ. ಆದರೆ ಪ್ರಕರಣದ ವಿಚಾರಣೆ ಸುಪ್ರೀಂಕೋಟರ್್ನಲ್ಲಿದೆ.
ಪ್ರತಿವಾದಿಗಳು ಮೇಲ್ಮನವಿ ಸಲ್ಲಿಸಿದ್ದಾರೆ. ಮುಂದಿನ ದಿನಗಳಲ್ಲಿ ಸುಪ್ರೀಂಕೋಟರ್್ನ ತೀಪರ್ು ಯಾವ ರೀತಿ ಬರಲಿದೆ ಎಂಬುದು ಗೊತ್ತಿಲ್ಲ. ಸುಪ್ರೀಂಕೋಟರ್್ ತೀಪರ್ಿನ ಪರಿಣಾಮಗಳಿಗೆ ಬದ್ಧವಾಗಿ ಬಡ್ತಿ ಮೀಸಲಾತಿ ಕಾಯ್ದೆಯನ್ನು ಜಾರಿಗೊಳಿಸುವ ಕುರಿತು ಪರಿಶೀಲನೆ ನಡೆದಿದ್ದು, ಮುಖ್ಯ ಕಾರ್ಯದಶರ್ಿಯವರಿಂದ ವರದಿ ಕೇಳಲಾಗಿದೆ.
ರಾಷ್ಟ್ರಪತಿಗಳಿಂದ ಅಂಕಿತ ಬಂದಿರುವ ಈ ಕಾಯ್ದೆಯನ್ನು ಒಂದೆರಡು ದಿನಗಳೊಳಗಾಗಿ ಜಾರಿಗೊಳಿಸಲು ಪ್ರಯತ್ನಿಸುವುದಾಗಿ ಕುಮಾರಸ್ವಾಮಿ ಹೇಳಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 