ಯುವನಿಧಿ ಅನುಷ್ಠಾನ: ಕೌಶಲ್ಯಾಭಿವೃದ್ಧಿ ಸಚಿವರ ಭೇಟಿ ಮಾಡಿದ ಎಸ್.ಆರ್.ಪಾಟೀಲ
Implementation of Youth Fund: S.R.Patil met the Minister of Skill Development
ಯುವನಿಧಿ ಅನುಷ್ಠಾನ: ಕೌಶಲ್ಯಾಭಿವೃದ್ಧಿ ಸಚಿವರ ಭೇಟಿ ಮಾಡಿದ ಎಸ್.ಆರ್.ಪಾಟೀಲ
ಹಾವೇರಿ 12: ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್.ಆರ್. ಪಾಟೀಲ ಅವರು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲೊಂದಾದ “ಯುವನಿಧಿ” ಯೋಜನೆಯ ಪರಿಣಾಮಕಾರಿ ಅನುಷ್ಠಾನದ ಕುರಿತು ರಾಜ್ಯದ ಕೌಶಲ್ಯಾಭಿವೃದ್ಧಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ ಅವರನ್ನು ವಿಧಾನಸೌಧದ ಸಚಿವರ ಕಚೇರಿಯಲ್ಲಿ ಭೇಟಿ ಮಾಡಿ ಚರ್ಚಿಸಿದರು.
ವಿದ್ಯಾವಂತ ನಿರುದ್ಯೋಗಿ ಪದವೀಧರರು ಮತ್ತು ಡಿಪ್ಲೋಮಾ ಅಭ್ಯರ್ಥಿಗಳು ಯುವನಿಧಿಗೆ ಸುಲಭವಾಗಿ ನೊಂದಣಿ ಮಾಡಲು ಅನುವಾಗುವಂತೆ ಪ್ರಕ್ರಿಯೆ ಸರಳೀಕರಣಗೊಳಿಸುವುದು ಸೇರಿದಂತೆ ಯೋಜನೆಯ ಸಾಧಕ ಬಾಧಕಗಳ ಕುರಿತು ಚರ್ಚಿಸಿದರು.
ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ರಾಜ್ಯಾದ್ಯಂತ ಹಾಗೂ ವಿಶ್ವವಿದ್ಯಾನಿಲಯಗಳಲ್ಲಿ ನೊಂದಣಿ ಅಭಿಯಾನವನ್ನು ಕೈಗೊಂಡಿರುವ ಕುರಿತು ಎಸ್.ಆರ್. ಪಾಟೀಲ ಅವರು ಸಚಿವರನ್ನು ಅಭಿನಂದಿಸಿದರು.
ಯೋಜನೆ ಅನುಷ್ಠಾನಕ್ಕೆ ಯಾವುದೇ ಆರ್ಥಿಕ ತೊಂದರೆ ಇಲ್ಲ. ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ಅಭ್ಯರ್ಥಿಗಳು ನೊಂದಣಿಯಾಗುಂತೆ ಪ್ರೇರೆಪಿಸಲು ತಾಲೂಕು ಹಾಗೂ ಜಿಲ್ಲಾ ಘಟಕಗಳ ಸದಸ್ಯರು ಶ್ರಮ ವಹಿಸುತ್ತಿದ್ದಾರೆಂದು ಎಸ್.ಆರ್. ಪಾಟೀಲ ತಿಳಿಸಿದರು.
ರಾಣೇಬೆನ್ನೂರು ತಾಲೂಕಿನ ಮಹಿಳೆಯೊಬ್ಬರು ತಮ್ಮ ಒಂದು ವರ್ಷದ ಗೃಹಲಕ್ಷ್ಮೀ ಹಣ 24,000/- ರೂ.ಗಳನ್ನು ತಮ್ಮ ಗ್ರಾಮದ ಶಾಲೆಯ ಅಭಿವೃದ್ಧಿಗೆ ನೀಡಿ ಉದಾರತೆ ಮೆರೆದಿದ್ದನ್ನು ಸಚಿವರು ಶ್ಲಾಘಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 