ಮಂಗಾವಿ ದೇವಿ ದೇವಸ್ಥಾನ ಉದ್ಘಾಟನೆ

ಮಂಗಾವಿ ದೇವಿ ದೇವಸ್ಥಾನ ಉದ್ಘಾಟನೆ  Inauguration of Mangavi Devi Temple

ಯಮಕನಮರಡಿ, 22 : ಇವತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳು ಹಾಗೂ ಅಪೇಕ್ಸ ಮತ್ತು ಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ರಾಹುಲ್ ಜಾರಕಿಹೊಳಿ ಅವರು ಯಮಕನಮರಡಿ ವಿಧಾನಸಭಾ ಕ್ಷೇತ್ರದ ಕರವಿನಕುಂಪಿ ಗ್ರಾಮದಲ್ಲಿ ಇಂದು ಶ್ರೀ ಮಂಗಾಯಿ ದೇವಸ್ಥಾನದ ಉದ್ಘಾಟನೆ, ಮೂರ್ತಿ ಪ್ರತಿಷ್ಠಾಪನೆ ಮತ್ತು ಕಳಸಾರೋಹನ ಸಮಾರಂಭದಲ್ಲಿ ಭಾಗವಹಿಸಿ, ದೇವಿಯ ಆಶೀರ್ವಾದ ಪಡೆದ ನಂತರ ಈ ಸಂದರ್ಭದಲ್ಲಿ ಹಮ್ಮಿಕೊಂಡಿದ್ದ ಸತ್ಕಾರ ಸಮಾರಂಭದಲ್ಲಿ ಪಾಲ್ಗೊಂಡು, ಮಾತನಾಡಿದರು.   ಈ ವೇಳೆ ಸಚಿವರ ಆಪ್ತ ಸಹಾಯಕರಾದ ಅರವಿಂದ ಕಾರ್ಚಿ. ಕಾಕತಿ ಬ್ಲಾಕ್ ಎಸ್ ಟಿ ಘಟಕದ ಅಧ್ಯಕ್ಷರಾದ ಭರತ ಪೂಜೇರಿ ಬೀಮರಾಮ ನಾಯಿಕ ಪರಶು ಪೂಜೇರಿ ಗ್ರಾಮದ ಹಿರಿಯರು, ಮುಖಂಡರು ಮತ್ತು ಯುವಕರು ಮಹಿಳೆಯರು ಉಪಸ್ಥಿತರಿದ್ದರು.