ಮೀಡಿಯಾ ಕ್ಲಬ್ ಅಧ್ಯಕ್ಷ-ಗೌರವಾಧ್ಯಕ್ಷರ ಪದಗ್ರಹಣ
Inauguration of Media Club President-Honorary President
ಕೊಪ್ಪಳ 17: ಕೊಪ್ಪಳ ಮೀಡಿಯಾ ಕ್ಲಬ್ನಲ್ಲಿ ನೂತನ ಅಧ್ಯಕ್ಷ ಹಾಗೂ ಗೌರವಾಧ್ಯಕ್ಷರ ಪದಗ್ರಹಣ ಹಾಗೂ ನೂತನ ಸದಸ್ಯರ ಸೇರೆ್ಡ ಸಭೆ ಶುಕ್ರವಾರ ಜರುಗಿತು. ಕ್ಲಬ್ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ದೇವು ನಾಗನೂರು, ಗೌರವಾಧ್ಯಕ್ಷರಾಗಿ ಆಯ್ಕೆಯಾದ ಬಸವರಾಜ ಕರುಗಲ್ ಅವರನ್ನು ಕ್ಲಬ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಇನ್ನು ನಿರ್ಗಮಿತ ಅಧ್ಯಕ್ಷ ರವೀಂದ್ರ ವಿ.ಕೆ., ನಿರ್ಗಮಿತ ಗೌರವಾಧ್ಯಕ್ಷ ಪ್ರಕಾಶ ಕಂದಕೂರು ಅವರನ್ನು ಸನ್ಮಾನಿಸಲಾಯಿತು.ಸಭೆಯಲ್ಲಿ ನೂತನ ಅಧ್ಯಕ್ಷರಾದ ದೇವು ನಾಗನೂರು ಹಾಗೂ ಗೌರವಾಧ್ಯಕ್ಷ ಬಸವರಾಜ ಕರುಗಲ್ ಅವರು ಮಾತನಾಡಿ, ಕ್ಲಬ್ನಲ್ಲಿ ಈ ಹಿಂದೆ ಕೈಗೊಂಡ ಕಾರ್ಯ ಚಟುವಟಿಕೆಗಳನ್ನು ಮುಂದುವರೆಸಿಕೊಂಡು ಹೋಗುವುದಲ್ಲದೇ ಕ್ಲಬ್ನ ಸದಸ್ಯರ ಹಿತಾಸಕ್ತಿಯನ್ನು ಕಾಪಾಡುವ ಕೆಲಸ ಮಾಡುವುದಾಗಿ ಅವರು ಭರವಸೆ ನೀಡಿದರು.
ಕ್ಲಬ್ ನೂತನ ಸದಸ್ಯರಾಗಿ ಸೇರೆ್ಡಯಾದ ಕುಬೇರ ಮಜ್ಜಗಿ, ರಮೇಶ ಅವರನ್ನು ಸ್ವಾಗತಿಸಲಾಯಿತು. ಕ್ಲಬ್ನಲ್ಲಿ ಹಲವು ಸದಸ್ಯರು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.ಸಭೆಯಲ್ಲಿ ಉಪಾಧ್ಯಕ್ಷ ಮುಕ್ಕಣ್ಣ ಕತ್ತಿ, ಕಾರ್ಯದರ್ಶಿ ದತ್ತು ಕಮ್ಮಾರ, ಖಜಾಂಚಿ ಅನಿಲ್ ಬಾಚನಹಳ್ಳಿಹಾಗೂ ಕ್ಲಬ್ ಸದಸ್ಯರಾದ ಸೋಮರಡ್ಡಿ ಅಳವಂಡಿ, ಬಸವರಾಜ ಶೀಲವಂತರ, ಸುಬ್ಬಾರಾವ್ ಪಟವಾರಿ, ನಾಭಿರಾಜ ದಸ್ತೇನವರ, ಮಾರುತಿ ಕಟ್ಟಿಮನಿ, ಶ್ರೀಕಾಂತ ಅಕ್ಕಿ, ಹುಸೇನ ಪಾಷಾ, ದೊಡ್ಡೇಶ ಯಲಿಗಾರ, ವಿಠ್ಠಲ ದುತ್ತರಗಿ, ಸಂತೋಷ ದೇಶಪಾಂಡೆ, ಪ್ರಮೋದ ಕುಲಕರ್ಣಿ, ಬಸವರಾಜ ಕರ್ಕಿಹಳ್ಳಿ, ರವೀಂದ್ರ ವಿ.ಕೆ, ವಿನಾಯಕ, ಸಮೀರ ಪಾಟೀಲ್, ಶರಣಬಸವ ಹುಲಿಹೈದರ್, ಮಂಜುನಾಥ ಗಂಗಾವತಿ, ಈರಯ್ಯ ಹಿರೇಮಠ ಅವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 