ರಾಜ್ಯ ಶಾಸ್ತ್ರದ ಬೂಸ್ಟರ್ ಕ್ಲಾಸ್ ಉದ್ಘಾಟನೆ
Inauguration of State Science Booster Class
ಹೂವಿನಹಡಗಲಿ 22 : ಕಲಾ ವಿಭಾಗದ ವಿದ್ಯಾರ್ಥಿಗಳು ತಮ್ಮ ರಾಜ್ಯಶಾಸ್ತ್ರ, ಇತಿಹಾಸದಂತಹ ವಿಷಯಗಳನ್ನು ಕೇವಲ ಪರೀಕ್ಷಾ ದೃಷ್ಟಿಯಿಂದ ಓದದೇ, ಸ್ಪರ್ಧಾತ್ಮಕ ಜಗತ್ತಿನ ದೃಷ್ಟಿಯಿಂದ ಓದಿದಲ್ಲಿ ಉನ್ನತ ಹುದ್ದೆಗೆ ಪಡೆಯಬಹುದು ಎಂದು ಪ್ರಾಚಾರ್ಯ ಎ. ಕೊಟ್ರಗೌಡ ಅಭಿಪ್ರಾಯಪಟ್ಟರು. ಪಟ್ಟಣದ ಶ್ರೀಮತಿ ಸೊಪ್ಪಿನ ಕಾಳಮ್ಮನವರ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕಲಾ ಮತ್ತು ಶಿಕ್ಷಣ ವಿಭಾಗದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ರಾಜ್ಯಶಾಸ್ತ್ರ ವಿಷಯದ ಬೂಸ್ಟರ್ ಕ್ಲಾಸ್ ಉದ್ಘಾಟಿಸಿ ಮಾತನಾಡಿ ಬೂಸ್ಟರ್ ಕ್ಲಾಸ್ ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಿ ಎಂದರು.ಹಿರೇಹಡಗಲಿ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಹಾಗೂ ಉತ್ತಂಗಿ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಕಲ್ಲನಗೌಡ್ರ ಪ್ರಕಾಶ್ ಮಾತನಾಡಿ ಮಾದರಿ ಪ್ರಶ್ನೆಪತ್ರಿಕೆಗಳು ಬಳಸಿಕೊಂಡು ಪರೀಕ್ಷೆಯಲ್ಲಿ ಯಶಸ್ಸು ಸಾಧಿಸುವ ಸರಳ ಮಾರ್ಗಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಕಾಲೇಜಿನ ಉಪನ್ಯಾಸಕರಾದ ಬಸೆಟ್ಟಿ ಪ್ರಕಾಶ್, ಗುರುಬಸವರಾಜ್, ಶಿವಕುಮಾರ್, ನಟರಾಜ್ ಪಾಟೀಲ್, ದುಷ್ಯಂತ, ಶ್ರೀಕಾಂತ್, ವೀರೇಶ್, ಮಂಜುನಾಥ್, ಆರತಿ, ಶಂಕರ್, ಪರಂಜ್ಯೋತಿ, ಉಮಾ, ರಶ್ಮಿ, ಪರಶುರಾಮ ನಾಗೋಜಿ ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 