ರಾಜ್ಯ ಶಾಸ್ತ್ರದ ಬೂಸ್ಟರ್ ಕ್ಲಾಸ್ ಉದ್ಘಾಟನೆ
Inauguration of State Science Booster Class
ಹೂವಿನಹಡಗಲಿ 22 : ಕಲಾ ವಿಭಾಗದ ವಿದ್ಯಾರ್ಥಿಗಳು ತಮ್ಮ ರಾಜ್ಯಶಾಸ್ತ್ರ, ಇತಿಹಾಸದಂತಹ ವಿಷಯಗಳನ್ನು ಕೇವಲ ಪರೀಕ್ಷಾ ದೃಷ್ಟಿಯಿಂದ ಓದದೇ, ಸ್ಪರ್ಧಾತ್ಮಕ ಜಗತ್ತಿನ ದೃಷ್ಟಿಯಿಂದ ಓದಿದಲ್ಲಿ ಉನ್ನತ ಹುದ್ದೆಗೆ ಪಡೆಯಬಹುದು ಎಂದು ಪ್ರಾಚಾರ್ಯ ಎ. ಕೊಟ್ರಗೌಡ ಅಭಿಪ್ರಾಯಪಟ್ಟರು. ಪಟ್ಟಣದ ಶ್ರೀಮತಿ ಸೊಪ್ಪಿನ ಕಾಳಮ್ಮನವರ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕಲಾ ಮತ್ತು ಶಿಕ್ಷಣ ವಿಭಾಗದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ರಾಜ್ಯಶಾಸ್ತ್ರ ವಿಷಯದ ಬೂಸ್ಟರ್ ಕ್ಲಾಸ್ ಉದ್ಘಾಟಿಸಿ ಮಾತನಾಡಿ ಬೂಸ್ಟರ್ ಕ್ಲಾಸ್ ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಿ ಎಂದರು.ಹಿರೇಹಡಗಲಿ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಹಾಗೂ ಉತ್ತಂಗಿ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಕಲ್ಲನಗೌಡ್ರ ಪ್ರಕಾಶ್ ಮಾತನಾಡಿ ಮಾದರಿ ಪ್ರಶ್ನೆಪತ್ರಿಕೆಗಳು ಬಳಸಿಕೊಂಡು ಪರೀಕ್ಷೆಯಲ್ಲಿ ಯಶಸ್ಸು ಸಾಧಿಸುವ ಸರಳ ಮಾರ್ಗಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಕಾಲೇಜಿನ ಉಪನ್ಯಾಸಕರಾದ ಬಸೆಟ್ಟಿ ಪ್ರಕಾಶ್, ಗುರುಬಸವರಾಜ್, ಶಿವಕುಮಾರ್, ನಟರಾಜ್ ಪಾಟೀಲ್, ದುಷ್ಯಂತ, ಶ್ರೀಕಾಂತ್, ವೀರೇಶ್, ಮಂಜುನಾಥ್, ಆರತಿ, ಶಂಕರ್, ಪರಂಜ್ಯೋತಿ, ಉಮಾ, ರಶ್ಮಿ, ಪರಶುರಾಮ ನಾಗೋಜಿ ಭಾಗವಹಿಸಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 