“ಹುಚ್ಚರ ಸಂತೆ” ನಗೆ ನಾಟಕ ಪ್ರದರ್ಶನದ ಉದ್ಘಾಟನೆ
Inauguration of “Crazy Santa” comedy show
“ಹುಚ್ಚರ ಸಂತೆ” ನಗೆ ನಾಟಕ ಪ್ರದರ್ಶನದ ಉದ್ಘಾಟನೆ
ಧಾರವಾಡ. 23 : ಧಾರವಾಡದ ಪಂ.ಪುಟ್ಟರಾಜ ಗವಾಯಿಗಳ ಕಲಾ ಪ್ರತಿಷ್ಠಾನ ಮತ್ತು ಸಂತತ ಟ್ರಸ್ಟ್ ವತಿಯಿಂದ, ಟೂರಿಂಗ್ಟಾಕೀಸ್ ಅಭಿನಯಿಸುವ ರಂಗಭೂಮಿ ಮತ್ತು ಕಿರುತೆರೆ ನಟ ಉಮೇಶ ತೇಲಿ ನಿರ್ದೇಶನದ ‘ಹುಚ್ಚರ ಸಂತೆ’ ನಗೆ ನಾಟಕವನ್ನು ಜನೆವರಿ 25 ರಂದು ಶನಿವಾರ ಸಂಜೆ 6:45ಕ್ಕೆ ಧಾರವಾಡದ ಸೃಜನಾ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ವಸತಿ ಶಾಲೆಗಳ ನಿಲಯ ಪಾಲಕರ ಸಂಘದ ರಾಜ್ಯಾಧ್ಯಕ್ಷರಾದ ಸುರೇಶ ಗುಂಡಣ್ಣವರ ನೆರೆವೆರಿಸುವರು. ಅಧ್ಯಕ್ಷತೆಯನ್ನು ಪಂ.ಪುಟ್ಟರಾಜ ಗವಾಯಿಗಳ ಕಲಾ ಪ್ರತಿಷ್ಠಾನದ ಅಧ್ಯಕ್ಷರಾದ ಎಮ್ ಎಸ್ ಫರಾಸ್ ವಹಿಸುವರು. ಮುಖ್ಯ ಅತಿಥಿಗಳಾಗಿ ವಾಲ್ಮಿಯ ಹಿರಿಯ ಅಭಿಯಂತರರಾದ ಬಸವರಾಜ ಬಂಡಿವಡ್ಡರ, ಇಂಜಿನಿಯರ್ ಅಸೋಸಿಯೇಷನ್ ಧಾರವಾಡ ಸೆಂಟ್ರಲ್ನ ಅಧ್ಯಕ್ಷರಾದ ಸುನಿಲ್ ಬಾಗೇವಾಡಿ ಆಗಮಿಸುವರು. ಇದೇ ಸಂದರ್ಭದಲ್ಲಿ ಹಿರಿಯ ಅಭಿಯಂತರರಾದ ಸಂಜಯ ಕಬ್ಬೂರ, ಕಲಾವಿದರಾದ ವೀರಣ್ಣ ಪತ್ತಾರ ಅವರನ್ನು ಗೌರವಿಸಲಾಗುವುದು ಎಂದು ಪ್ರದಾನ ಕಾರ್ಯದರ್ಶಿ ಮಾತಾಂರ್ಡಪ್ಪ ಕತ್ತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ 