ಇಂಚಲ ಶಿವಯೋಗೀಶ್ವರ ಸಾಧು ಸಂಸ್ಥಾನ ಮಠದ ರಥೋತ್ಸವ
ಲೋಕದರ್ಶನ ವರದಿ
ಬೈಲಹೊಂಗಲ,2: ಸುಕ್ಷೇತ್ರ ಇಂಚಲ ಶಿವಯೋಗೀಶ್ವರ ಸಾಧು ಸಂಸ್ಥಾನ ಮಠದ ಡಾ.ಶಿವಾನಂದ ಭಾರತಿ ಸ್ವಾಮೀಜಿಯವರ 79 ನೇ ಹುಟ್ಟುಹಬ್ಬದಂಗವಾಗಿ ಬುಧವಾರ ನಡೆದ ರಜತ ರಥೋತ್ಸವ ಮತ್ತು ಮಹಾರಥೋತ್ಸವ ಅದ್ದೂರಿಯಿಂದ ಜರುಗಿತು. ಸಹಸ್ರಾರು ಭಕ್ತಾದಿಗಳೆಲ್ಲ ಕೂಡಿ ಬುಧವಾರ ಸಮಾರೋಪಗೊಂಡ ಜಾತ್ರಾ ಮಹೋತ್ಸವದಲ್ಲಿ ರಜತ ರಥ ಮತ್ತು ಮಹಾರಥೋತ್ಸವವನ್ನು ಹರ ಹರ ಮಹಾದೇವ,ಶ್ರೀ ಶಿವಾನಂದ ಭಾರತಿ ಮಹಾರಾಜಕೀ ಜೈ ಘೋಷ ಮುಗಿಲು ಮುಟ್ಟುವಂತೆ ಜೈಕಾರ ಕೇಳಿ ಬಂದಿತು.
ಹಂಪಿ ಹೇಮಕೂಟದ ವಿದ್ಯಾನಂದ ಭಾರತಿ ಸ್ವಾಮಿಗಳು, ಕುಳ್ಳೂರಿನ ಬಸವಾನಂದ ಸ್ವಾಮಿಜಿ, ಚಿಕ್ಕೂರಿನ ಅಲ್ಲಮಪ್ರಭು, ಪೂಣರ್ಾನಂದ ಸ್ವಾಮಿಗಳು, ಮಲ್ಲಾಪೂರದ ಚಿದಾನಂದ ಸ್ವಾಮೀಜಿ ರಥೋತ್ಸವಕ್ಕೆ ಚಾಲನೆ ನೀಡಿದರು. ಭಕ್ತರು ಉತ್ತತ್ತಿ, ಬಾಳೇಹಣ್ಣು ಎಸೆದು ಭಕ್ತಿಯ ಪರಾಕಾಷ್ಠೆ ಮೆರೆದರು. ಮಕ್ಕಳ ಮಾರಾಟ ಮಳಿಗೆಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಮಹಿಳೆಯರು,ಮಕ್ಕಳು ಮಕ್ಕಳ ಆಟಿಕೆ ಕೊಳ್ಳು ಮುಗಿಬಿದ್ದಿರುವುದು ಕಂಡು ಬಂದಿತು.
ರಥೋತ್ಸವದಲ್ಲಿ ಶಿವಯೋಗಿಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಿ.ಬಿ.ಮಲ್ಲೂರ, ಎಸ್.ಎಂ.ರಾಹುತನವರ, ಪುರಸಭೆ ಸದಸ್ಯ ಬಸವರಾಜ ಜನ್ಮಟ್ಟಿ, ಇಂಜನೀಯರ್ ವಿಜಯಕುಮಾರ, ಬೇವಿನಕೊಪ್ಪ, ಎಸ್.ಎನ್.ಕೊಳ್ಳಿ, ಎಸ್.ಎಮ್.ದಿನ್ನಿಮನಿ ಹಾಗೂ ಮಹಾರಾಷ್ಟ್ರ, ಆಂದ್ರಪ್ರದೇಶ, ಕೇರಳ, ಗೋವಾ, ದೆಹಲಿ ಸೇರಿದಂತೆ ಸಹಸ್ರಾರು ಭಕ್ತಾಧಿಗಳು ಉಪಸ್ಥಿತರಿದ್ದರು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 