ದನದ ಕೊಟ್ಟಿಗೆಗೆ ಹಾನಿ ಮಾಡಿದ ಘಟನೆ
Incident of damage to a cowshed
ದಾಂಡೇಲಿ 02: ಇಲ್ಲಿಗೆ ಸಮೀಪದ ಆಲೂರು ಗ್ರಾಮದ ಹೊಲಕ್ಕೆ ಒಂಟಿ ಸಲಗವೊಂದು ದನದ ಕೊಟ್ಟಿಗೆಗೆ ಹಾನಿ ಮಾಡಿದ ಘಟನೆ ರವಿವಾರ ಮಧ್ಯರಾತ್ರಿ ನಡೆದಿದೆ. ಕಳೆದ ಕೆಲವು ತಿಂಗಳಿಂದ ಆಲೂರು ಗ್ರಾಮಕ್ಕೆ ಮೇಲಿಂದ ಮೇಲೆ ಕಾಡಾನೆಗಳು ನುಗ್ಗಿ ಬೆಳೆ ನಾಶ ಮಾಡುತ್ತಾ ಬಂದಿದ್ದವು. ಆದರೆ ರವಿವಾರ ಮಧ್ಯರಾತ್ರಿ ಆಲೂರಿನ ಹೊಲಕ್ಕೆ ನುಗ್ಗಿರುವ ಒಂಟಿಸಲಗವೊಂದು ಬೆಳೆಗಳನ್ನು ಹಾನಿ ಮಾಡಿ, ಹೊಲದಲ್ಲಿದ್ದ ಕೊಟ್ಟಿಗೆಗೆ ನುಗ್ಗಿ ದ್ವಂಸಗೊಳಿಸಿದ್ದಲ್ಲದೆ, ಅಲ್ಲಿದ್ದ ಎಮ್ಮೆ ಮತ್ತು ಕರುವಿಗೆ ಗಾಯಗೊಳಿಸಿದ ಘಟನೆ ಕೂಡಾ ಜರುಗಿದೆ. ಆಲೂರಿನ ಪುಂಡಲಿಕ ಜಾಧವ ಎನ್ನುವವರ ಹೊಲದಲ್ಲಿರುವ ದನದ ಕೊಟ್ಟಿಗೆಯಾಗಿತ್ತು. ಅರಣ್ಯ ಇಲಾಖೆಯವರು ಕೂಡಲೇ ಪರೀಶೀಲನೆ ನಡೆಸಿ ಸೂಕ್ತ ಪರಿಹಾರ ನೀಡುವದರೊಂದಿಗೆ ಕಾಡಾನೆಯನ್ನು ಕಾಡಿಗಟ್ಟುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 