ದನದ ಕೊಟ್ಟಿಗೆಗೆ ಹಾನಿ ಮಾಡಿದ ಘಟನೆ
Incident of damage to a cowshed
ದಾಂಡೇಲಿ 02: ಇಲ್ಲಿಗೆ ಸಮೀಪದ ಆಲೂರು ಗ್ರಾಮದ ಹೊಲಕ್ಕೆ ಒಂಟಿ ಸಲಗವೊಂದು ದನದ ಕೊಟ್ಟಿಗೆಗೆ ಹಾನಿ ಮಾಡಿದ ಘಟನೆ ರವಿವಾರ ಮಧ್ಯರಾತ್ರಿ ನಡೆದಿದೆ. ಕಳೆದ ಕೆಲವು ತಿಂಗಳಿಂದ ಆಲೂರು ಗ್ರಾಮಕ್ಕೆ ಮೇಲಿಂದ ಮೇಲೆ ಕಾಡಾನೆಗಳು ನುಗ್ಗಿ ಬೆಳೆ ನಾಶ ಮಾಡುತ್ತಾ ಬಂದಿದ್ದವು. ಆದರೆ ರವಿವಾರ ಮಧ್ಯರಾತ್ರಿ ಆಲೂರಿನ ಹೊಲಕ್ಕೆ ನುಗ್ಗಿರುವ ಒಂಟಿಸಲಗವೊಂದು ಬೆಳೆಗಳನ್ನು ಹಾನಿ ಮಾಡಿ, ಹೊಲದಲ್ಲಿದ್ದ ಕೊಟ್ಟಿಗೆಗೆ ನುಗ್ಗಿ ದ್ವಂಸಗೊಳಿಸಿದ್ದಲ್ಲದೆ, ಅಲ್ಲಿದ್ದ ಎಮ್ಮೆ ಮತ್ತು ಕರುವಿಗೆ ಗಾಯಗೊಳಿಸಿದ ಘಟನೆ ಕೂಡಾ ಜರುಗಿದೆ. ಆಲೂರಿನ ಪುಂಡಲಿಕ ಜಾಧವ ಎನ್ನುವವರ ಹೊಲದಲ್ಲಿರುವ ದನದ ಕೊಟ್ಟಿಗೆಯಾಗಿತ್ತು. ಅರಣ್ಯ ಇಲಾಖೆಯವರು ಕೂಡಲೇ ಪರೀಶೀಲನೆ ನಡೆಸಿ ಸೂಕ್ತ ಪರಿಹಾರ ನೀಡುವದರೊಂದಿಗೆ ಕಾಡಾನೆಯನ್ನು ಕಾಡಿಗಟ್ಟುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 