ದನದ ಕೊಟ್ಟಿಗೆಗೆ ಹಾನಿ ಮಾಡಿದ ಘಟನೆ
Incident of damage to a cowshed
ದಾಂಡೇಲಿ 02: ಇಲ್ಲಿಗೆ ಸಮೀಪದ ಆಲೂರು ಗ್ರಾಮದ ಹೊಲಕ್ಕೆ ಒಂಟಿ ಸಲಗವೊಂದು ದನದ ಕೊಟ್ಟಿಗೆಗೆ ಹಾನಿ ಮಾಡಿದ ಘಟನೆ ರವಿವಾರ ಮಧ್ಯರಾತ್ರಿ ನಡೆದಿದೆ. ಕಳೆದ ಕೆಲವು ತಿಂಗಳಿಂದ ಆಲೂರು ಗ್ರಾಮಕ್ಕೆ ಮೇಲಿಂದ ಮೇಲೆ ಕಾಡಾನೆಗಳು ನುಗ್ಗಿ ಬೆಳೆ ನಾಶ ಮಾಡುತ್ತಾ ಬಂದಿದ್ದವು. ಆದರೆ ರವಿವಾರ ಮಧ್ಯರಾತ್ರಿ ಆಲೂರಿನ ಹೊಲಕ್ಕೆ ನುಗ್ಗಿರುವ ಒಂಟಿಸಲಗವೊಂದು ಬೆಳೆಗಳನ್ನು ಹಾನಿ ಮಾಡಿ, ಹೊಲದಲ್ಲಿದ್ದ ಕೊಟ್ಟಿಗೆಗೆ ನುಗ್ಗಿ ದ್ವಂಸಗೊಳಿಸಿದ್ದಲ್ಲದೆ, ಅಲ್ಲಿದ್ದ ಎಮ್ಮೆ ಮತ್ತು ಕರುವಿಗೆ ಗಾಯಗೊಳಿಸಿದ ಘಟನೆ ಕೂಡಾ ಜರುಗಿದೆ. ಆಲೂರಿನ ಪುಂಡಲಿಕ ಜಾಧವ ಎನ್ನುವವರ ಹೊಲದಲ್ಲಿರುವ ದನದ ಕೊಟ್ಟಿಗೆಯಾಗಿತ್ತು. ಅರಣ್ಯ ಇಲಾಖೆಯವರು ಕೂಡಲೇ ಪರೀಶೀಲನೆ ನಡೆಸಿ ಸೂಕ್ತ ಪರಿಹಾರ ನೀಡುವದರೊಂದಿಗೆ ಕಾಡಾನೆಯನ್ನು ಕಾಡಿಗಟ್ಟುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 