ಕಬ್ಬಿನ ಬೆಲೆ ನಿಗದಿಗಾಗಿ ಅನಿರ್ದಿಷ್ಟಾವಧಿ ಮುಷ್ಕರ
Indefinite strike for sugarcane price fixing
ಇಂಡಿ 03: ತಾಲೂಕಿನ ಹೃದಯ ಭಾಗದಲ್ಲಿರುವ ಬಸವೇಶ್ವರ ವೃತ್ತದ ಬಳಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಕಬ್ಬಿಗೆ ಬೆಂಬಲ ಬೆಲೆ ಘೋಷಣೆ ಆಗುವವರೆಗೆ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಕೈಗೊಳ್ಳಲಾಗಿದೆ ಎಂದು ರೈತ ಜಿಲ್ಲಾ ಅಧ್ಯಕ್ಷ ಹೇಳಿದರು. ಈ ಧರಣಿ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿದ ಇಂಡಿ ತಾಲೂಕಿನ ಜೆಡಿಎಸ್ ಮುಖಂಡ ಬಿ ಡಿ ಪಾಟೀಲ ಅವರು ಮಾತನಾಡಿ ಸಕ್ಕರೆ ಕಾರ್ಖಾನೆಗಳಿಂದ ರೈತರಿಗೆ ಅನ್ಯಾಯವಾಗುತ್ತಿದೆ. ರೈತರ ಕಬ್ಬಿಗೆ ಪ್ರತಿ ಟನ್ ಕಬ್ಬಿಗೆ ಮೂರುವರೆ ಸಾವಿರ ರೂಪಾಯಿ ಬೆಲೆ ನಿಗದಿ ಮಾಡಬೇಕು ಹಾಗೂ ಈ ಬಾರಿ ಸುರಿದ ಭಾರಿ ಮಳೆಯಿಂದ ರೈತರ ಬದುಕು ಮೂರಾಬಟ್ಟೆ ಆಗಿ ಹೋಗಿದೆ. ಬೆಳೆ ಕಳೆದುಕೊಂಡ ರೈತರಿಗೆ ಸರ್ಕಾರ ಇವರಿಗೆ ಪರಿಹಾರ ನೀಡಿದೆ.ರೈತರೊಂದಿಗೆ ಚೆಲ್ಲಾಟವಾಡುತ್ತಿದೆ. ಹಾಗೂ ಪ್ರವಾಹ ಭೀತಿಯಿಂದ ಭೀಮಾ ತೀರದಲ್ಲಿ ಸುಮಾರು ಎಕರೆ ಕಬ್ಬು ಬೆಳೆ ಹಾಗೂ ಹತ್ತಿ ಮೆಕ್ಕೆಜೋಳ ತೊಗರಿ ಸೇರಿದಂತೆ ಅನೇಕ ಬೆಳೆಗಳು ಹಾನಿಯಾಗಿವೆ. ಹಾಗೂ ಅನೇಕ ಮನೆಗಳಿಗೆ ನೀರು ನುಗ್ಗಿ ಮನೆ ಕಳೆದುಕೊಂಡ ನೊಂದ ಫಲಾನುಭವಿಗಳಿಗೆ ಇನ್ನೂ ಮನೆ ಪರಿಹಾರ ನೀಡಿಲ್ಲ. ಆದರೆ ಸರ್ಕಾರ ಮಾತ್ರ ನವೆಂಬರ್ ಕ್ರಾಂತಿ ಡಿಸೆಂಬರ್ ಕ್ರಾಂತಿ ಹೇಳುತ್ತಾ ಜನರ ನಿದ್ದೆಗೆಡಿಸಿದೆ. ನಾವು ರೈತ ಪರ ಅಂತ ಹೇಳುವ ಕಾಂಗ್ರೆಸ್ ಪಕ್ಷ ರೈತರ ಜ್ಯೋತಿ ಚೆಲ್ಲಾಟ ಆಡುತ್ತಾ ಕಾಲ ಹರಣ ಮಾಡುತ್ತದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಈ ಸಂದರ್ಭದಲ್ಲಿ ಅನೇಕ ರೈತ ಮುಖಂಡರು ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 