ಜಿಲ್ಲಾ ಉಸ್ತುವಾರಿ ಸಚಿವರಿಂದ ಇಂದಿರಾ ಕ್ಯಾಂಟಿನ್ ಉದ್ಘಾಟನೆ
ಕೊಪ್ಪಳ 31: ಕೊಪ್ಪಳ ನಗರದಲ್ಲಿ ನೂತನವಾಗಿ ನಿಮರ್ಾಣಗೊಂಡಿರುವ ಇಂದಿರಾ ಕ್ಯಾಂಟೀನ್ಗೆ ಜಿಲ್ಲಾ ಉಸ್ತುವಾರಿ ಹಾಗೂ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಆರ್. ಶಂಕರ್ ಅವರು ರಿಬ್ಬನ್ ಕತ್ತರಿಸುವುದರ ಮೂಲಕ ಉದ್ಘಾಟಿಸಿದರು.
ಅಲ್ಲದೇ ಸಚಿವರೊಂದಿಗೆ ಶಾಸಕ ಕೆ. ರಾಘವೇಂದ್ರ
ಹಿಟ್ನಾಳ ಅವರು ಸಹ ಇಂದಿರ
ಕ್ಯಾಂಟೀನ್ ಕಟ್ಟಡವನ್ನು ಪರಿಶೀಲಿಸಿದರು. ನಂತರ
ಕ್ಯಾಂಟೀನಿನ ಅಡುಗೆ ತಯಾರಿಕಾ ಕೊಠಡಿಯಲ್ಲಿ ಆಹಾರ ತಯಾರಿಕಾ ಪ್ರಕ್ರಿಯೆ
ಹಾಗೂ ಗುಣಮಟ್ಟವನ್ನು ಸ್ವತಹ ಸಚಿವರೇ ಪರಿಶೀಲಿಸುವುದರ ಜೊತೆಗೆ ಕ್ಯಾಂಟೀನಿನ ಬೆಳಿಗ್ಗೆಯ ಉಪಹಾರವಾದ ಸಿರಾ ಮತ್ತು ಉಪ್ಪಿಟ್ಟಿನ
ರುಚಿ ಸವಿದರು.
ಜಿಲ್ಲಾ ಉಸ್ತುವಾರಿ ಹಾಗೂ ಅರಣ್ಯ, ಪರಿಸರ
ಮತ್ತು ಜೀವಿಶಾಸ್ತ್ರ ಸಚಿವರಾದ ಆರ್. ಶಂಕರ್ ಅವರು
ಮಾತನಾಡಿ, ಬಡವರಿಗೆ ಹಾಗೂ ಹಸಿದವರಿಗೆ ಇಂದಿರಾ
ಕ್ಯಾಂಟೀನ್ ಅತ್ಯಂತ ಕಡಿಮೆ ವೆಚ್ಚದಲ್ಲಿ ಊಟ-ಉಪಹಾರ ಸಿಗುವಂತೆ
ಮಾಡುವಂತಹ ಮಹತ್ತರವಾದ ಯೋಜನೆ ಇದಾಗಿದೆ. ಉಪಹಾರ
ಒಂದಕ್ಕೆ ರೂ. 05, ಊಟಕ್ಕೆ ರೂ. 10 ದರವನ್ನು ನಿಗದಿಪಡಿಸಲಾಗಿದೆ. ಒಂದು
ದಿನಕ್ಕೆ ಬೆಳಿಗ್ಗೆಯ ಉಪಹಾರ, ಮಧ್ಯಾಹ್ನ ಮತ್ತು ರಾತ್ರಿ ಊಟ ಸೇರಿದಂತೆ ಮೂರು
ಹೊತ್ತಿನಲ್ಲಿಯೂ ಸಹ ಸುಮಾರು 500 ಜನರಿಗೆ
ಆಹಾರ ಸಿಗುವ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಸಕರ್ಾರದಿಂದ
ಕೊಪ್ಪಳ ಜಿಲ್ಲೆಯಲ್ಲಿ ಒಟ್ಟು ಐದು ಕ್ಯಾಂಟೀನ್ಗಳು ಮಂಜೂರಾಗಿದ್ದು,
ಸದ್ಯ ಕೊಪ್ಪಳ ನಗರದಲ್ಲಿನ ಇಂದಿರಾ ಕ್ಯಾಂಟೀನ್ ಉದ್ಘಾಟನೆಯಾಗಿದೆ. ಇನ್ನುಳಿದ
ನಾಲ್ಕೂ ಕ್ಯಾಂಟೀನ್ಗಳು ಶೀಘ್ರ ಉದ್ಘಾಟನೆಯಾಗಲಿವೆ. ಇದರಿಂದ
ಜಿಲ್ಲೆಯ ಸಾರ್ವಜನಿಕರಿಗೆ ಹಾಗೂ ಪ್ರವಾಸಿಗರಿಗೆ ತುಂಬಾ
ಅನುಕೂಲವಾಗಲಿದೆ ಎಂದರು. ಕೊಪ್ಪಳ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್
ಸೇರಿದಂತೆ ನಗರಸಭೆ ಸದಸ್ಯರು ಹಾಗೂ ನಗರದ ಹಲವು
ಗಣ್ಯರು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 