ಜಿಲ್ಲಾ ಉಸ್ತುವಾರಿ ಸಚಿವರಿಂದ ಇಂದಿರಾ ಕ್ಯಾಂಟಿನ್ ಉದ್ಘಾಟನೆ
ಕೊಪ್ಪಳ 31: ಕೊಪ್ಪಳ ನಗರದಲ್ಲಿ ನೂತನವಾಗಿ ನಿಮರ್ಾಣಗೊಂಡಿರುವ ಇಂದಿರಾ ಕ್ಯಾಂಟೀನ್ಗೆ ಜಿಲ್ಲಾ ಉಸ್ತುವಾರಿ ಹಾಗೂ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಆರ್. ಶಂಕರ್ ಅವರು ರಿಬ್ಬನ್ ಕತ್ತರಿಸುವುದರ ಮೂಲಕ ಉದ್ಘಾಟಿಸಿದರು.
ಅಲ್ಲದೇ ಸಚಿವರೊಂದಿಗೆ ಶಾಸಕ ಕೆ. ರಾಘವೇಂದ್ರ
ಹಿಟ್ನಾಳ ಅವರು ಸಹ ಇಂದಿರ
ಕ್ಯಾಂಟೀನ್ ಕಟ್ಟಡವನ್ನು ಪರಿಶೀಲಿಸಿದರು. ನಂತರ
ಕ್ಯಾಂಟೀನಿನ ಅಡುಗೆ ತಯಾರಿಕಾ ಕೊಠಡಿಯಲ್ಲಿ ಆಹಾರ ತಯಾರಿಕಾ ಪ್ರಕ್ರಿಯೆ
ಹಾಗೂ ಗುಣಮಟ್ಟವನ್ನು ಸ್ವತಹ ಸಚಿವರೇ ಪರಿಶೀಲಿಸುವುದರ ಜೊತೆಗೆ ಕ್ಯಾಂಟೀನಿನ ಬೆಳಿಗ್ಗೆಯ ಉಪಹಾರವಾದ ಸಿರಾ ಮತ್ತು ಉಪ್ಪಿಟ್ಟಿನ
ರುಚಿ ಸವಿದರು.
ಜಿಲ್ಲಾ ಉಸ್ತುವಾರಿ ಹಾಗೂ ಅರಣ್ಯ, ಪರಿಸರ
ಮತ್ತು ಜೀವಿಶಾಸ್ತ್ರ ಸಚಿವರಾದ ಆರ್. ಶಂಕರ್ ಅವರು
ಮಾತನಾಡಿ, ಬಡವರಿಗೆ ಹಾಗೂ ಹಸಿದವರಿಗೆ ಇಂದಿರಾ
ಕ್ಯಾಂಟೀನ್ ಅತ್ಯಂತ ಕಡಿಮೆ ವೆಚ್ಚದಲ್ಲಿ ಊಟ-ಉಪಹಾರ ಸಿಗುವಂತೆ
ಮಾಡುವಂತಹ ಮಹತ್ತರವಾದ ಯೋಜನೆ ಇದಾಗಿದೆ. ಉಪಹಾರ
ಒಂದಕ್ಕೆ ರೂ. 05, ಊಟಕ್ಕೆ ರೂ. 10 ದರವನ್ನು ನಿಗದಿಪಡಿಸಲಾಗಿದೆ. ಒಂದು
ದಿನಕ್ಕೆ ಬೆಳಿಗ್ಗೆಯ ಉಪಹಾರ, ಮಧ್ಯಾಹ್ನ ಮತ್ತು ರಾತ್ರಿ ಊಟ ಸೇರಿದಂತೆ ಮೂರು
ಹೊತ್ತಿನಲ್ಲಿಯೂ ಸಹ ಸುಮಾರು 500 ಜನರಿಗೆ
ಆಹಾರ ಸಿಗುವ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಸಕರ್ಾರದಿಂದ
ಕೊಪ್ಪಳ ಜಿಲ್ಲೆಯಲ್ಲಿ ಒಟ್ಟು ಐದು ಕ್ಯಾಂಟೀನ್ಗಳು ಮಂಜೂರಾಗಿದ್ದು,
ಸದ್ಯ ಕೊಪ್ಪಳ ನಗರದಲ್ಲಿನ ಇಂದಿರಾ ಕ್ಯಾಂಟೀನ್ ಉದ್ಘಾಟನೆಯಾಗಿದೆ. ಇನ್ನುಳಿದ
ನಾಲ್ಕೂ ಕ್ಯಾಂಟೀನ್ಗಳು ಶೀಘ್ರ ಉದ್ಘಾಟನೆಯಾಗಲಿವೆ. ಇದರಿಂದ
ಜಿಲ್ಲೆಯ ಸಾರ್ವಜನಿಕರಿಗೆ ಹಾಗೂ ಪ್ರವಾಸಿಗರಿಗೆ ತುಂಬಾ
ಅನುಕೂಲವಾಗಲಿದೆ ಎಂದರು. ಕೊಪ್ಪಳ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್
ಸೇರಿದಂತೆ ನಗರಸಭೆ ಸದಸ್ಯರು ಹಾಗೂ ನಗರದ ಹಲವು
ಗಣ್ಯರು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 