ಜಿ.ಪಂ ಸಿಇಓ ರವರಿಂದ ಜೆಜೆಎಮ್ ಎಮ್ ಕಾಮಗಾರಿ ಪರೀಶೀಲನೆ
Inspection of JJM M work by G. Pm CEO
ಜಿ.ಪಂ ಸಿಇಓ ರವರಿಂದ ಜೆಜೆಎಮ್ ಎಮ್ ಕಾಮಗಾರಿ ಪರೀಶೀಲನೆ
ಕಾರವಾರ.ಆ.11:- ಗ್ರಾಮೀಣ ಪ್ರದೇಶದಲ್ಲಿ ಬಾವಿ ನೀರಿನ ಬಳಕೆ ಅಧಿಕವಾಗಿದ್ದು ತಾಲೂಕಿನ ಕೆಲವು ಭಾಗಗಳಲ್ಲಿ ಜಲಜೀವನ್ ಮಿಷನ್ ಯೋಜನೆಯ ನೀರಿನ ಬಳಕೆ ಕಡಿಮೆ ಇದೆ ಹೀಗಾಗಿ ಸಾರ್ವಜನಿಕರ ನೀರಿನ ಬಳಕೆಯನ್ನ ಆಧರಿಸಿ ಪಂಚಾಯತ್ ವ್ಯಾಪ್ತಿಯಲ್ಲಿ ನೀರಿನ ಕರ ಪಾವತಿಸಲು ಅವಕಾಶ ಮಾಡಿಕೊಡಿ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ದೀಲೀಷ್ ಶಶಿ ಅವರು ಸೂಚನೆ ನೀಡಿದರು.
ಅವರು ಇಂದು ಸಿದ್ದಾಪುರ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಅಭಾವ ತಡೆಯಲು ತಾಲೂಕಿನ ವಿವಿಧ ಗ್ರಾಮ ಪಂಚಾಯತ್ಗಳಲ್ಲಿ ಜಲಜೀವನ್ ಮಿಷನ್ ನಡಿ ಅನುಷ್ಠಾನಗೊಂಡ ಕಾಮಗಾರಿಗಳ ಸ್ಥಳ ಭೇಟಿ ನಡೆಸಿ ಗುಣಮಟ್ಟ ಪರೀಶೀಲಿಸಿದರು.
ಮನೆ ಬಳಕೆ ಹಾಗೂ ಕುಡಿಯುವ ನೀರಿನಲ್ಲಿ ಲೋಪವಾಗದಂತೆ ನೋಡಿಕೊಳ್ಳಬೇಕು.ಇನ್ನೂ ಜಲಜೀವನ್ ಮಿಷನ್ ಯೋಜನೆಯಡಿ ಅನುಷ್ಠಾನಗೊಂಡ ಕಾಮಗಾರಿಗಳು ಪ್ರತಿ ಮನೆಗೂ ತಲುಪಬೇಕು ಜೊತೆಗೆ ನೀರಿನ ಶುದ್ಧತೆ ಹಾಗೂ ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದರು.
ಈ ವೇಳೆ ತಾಲೂಕಿನ ಹಲಗೇರಿ, ಕವಂಚೂರು, ಶಿರಳಗಿ, ಕಾನಗೋಡ ಹಾಗೂ ಬೇಡ್ಕಣಿ ಗ್ರಾಮ ಪಂಚಾಯತ್ಗಳಲ್ಲಿ ನೀರಿನ ಸಮರ್ಕ ಬಳಕೆ ಕುರಿತು ಸಾರ್ವಜನಿಕರಿಂದ ಮಾಹಿತಿ ಪಡೆದರು. ಗ್ರಾಮ ಪಂಚಾಯತ್ಗಳಿಗೆ ನೀರು ಸರಬರಾಜು ನಿರ್ವಹಣೆಯನ್ನು ಸಮರ್ಕವಾಗಿ ನಿಭಾಯಿಸಲು ಅಗತ್ಯ ಸಲಹೆ ನೀಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 