ವಿದ್ಯಾರ್ಥಿಗಳಲ್ಲಿ ಅಧ್ಯಯನದ ಆಸಕ್ತಿ ಮೂಡಿಸಿ: ಕಾಂಬಳೆ
Instill interest in studies among students: Kambale
ಜಮಖಂಡಿ 08: ಪರಿಣಾಮಕಾರಿ ಬೋಧನೆ ವಿದ್ಯಾರ್ಥಿಗಳಲ್ಲಿ ಅಧ್ಯಯನದ ಆಸಕ್ತಿ ಮೂಡಿಸಿ ಪರೀಕ್ಷೆ ಫಲಿತಾಂಶದಲ್ಲಿ ಗಣನೀಯ ಸುಧಾರಣೆಗೆ ಕಾರಣವಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆಯ(ಪ.ಪೂ) ಜಿಲ್ಲಾ ಉಪನಿರ್ದೇಶಕ ಪುಂಡಲೀಕ ಕಾಂಬಳೆ ಹೇಳಿದರು.
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಸುಧಾರಣೆ ಕುರಿತು ನಗರದ ಬಾಲಿಕೆಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ತಾಲ್ಲೂಕಿನ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಹಾಗೂ ಉಪನ್ಯಾಸಕರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಪೋಷಿಸುವ ಕೈಂಕರ್ಯದಲ್ಲಿ ಉಪನ್ಯಾಸಕರು ತೊಡಗಬೇಕು. ಪರಿಣಾಮಕಾರಿ ಬೋಧನೆಯಿಂದ ವಿದ್ಯಾರ್ಥಿಗಳಲ್ಲಿ ಕಲಿಕಾ ಸ್ಪೂರ್ತಿಯನ್ನು ತುಂಬಬೇಕು. ಪರೀಕ್ಷಾ ಭಯ ನಿವಾರಿಸಬೇಕು.
ವಿದ್ಯಾರ್ಥಿಗಳ ಆತ್ಮಬಲ ಹೆಚ್ಚಿಸಬೇಕು. ಪಾಲಕರೊಂದಿಗೆ ಸೌಜನ್ಯಯುತವಾಗಿ ವರ್ತಿಸಬೇಕು. ಒಟ್ಟಾರೆಯಾಗಿ ಕಲಿಕಾ ವಾತಾವರಣ ಸೃಷ್ಟಿಸಿ ರಾಜ್ಯದಲ್ಲಿ ಜಿಲ್ಲೆಯನ್ನು ಗುರುತಿಸುವಂತಾಗಬೇಕು ಎಂದರು. ಫಲಿತಾಂಶ ಸುಧಾರಣೆ ಸಮಿತಿ ಅಧ್ಯಕ್ಷ ಎಂ.ಎಲ್. ಪಾಟೀಲ, ವಿವಿಧ ಕಾಲೇಜುಗಳ ಪ್ರಾಚಾರ್ಯರಾದ ಎಸ್.ಆರ್. ನಾಯಕೋಡಿ, ಶ್ರೀಶೈಲ ಮುಂಡಗನೂರ, ಎಂ.ಎಂ. ಪುಟ್ಟಣ್ಣವರ, ರಫೀಕ ಜಹಗೀರದಾರ, ಹನಮಂತ ಮಗದುಮ, ಶ್ರೀಮಂತ ಅಜನಾಳ, ಶ್ರೀಶೈಲ ನಿಂಬಾಳ, ಎಸ್.ಎಸ್. ಬೆಕ್ಕೇರಿ, ರವಿ ಚಿನಗುಂಡಿ ಇತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 