ವರದಾ ಹಾಗೂ ಬೇಡ್ತಿ ನದಿಗಳ ಜೋಡಣೆ: ಪೂರ್ವಭಾವಿ ಸಭೆ

ವರದಾ ಹಾಗೂ ಬೇಡ್ತಿ ನದಿಗಳ ಜೋಡಣೆ: ಪೂರ್ವಭಾವಿ ಸಭೆ Interconnection of Varada and Bedi rivers: Preliminary meeting

ವರದಾ ಹಾಗೂ ಬೇಡ್ತಿ ನದಿಗಳ ಜೋಡಣೆ: ಪೂರ್ವಭಾವಿ ಸಭೆ 

ಹಾವೇರಿ 11: ಇಲ್ಲಿನ  ಹುಕ್ಕೇರಿಮಠದ ಆವರಣದಲ್ಲಿ ವರದಾ ಹಾಗೂ ಬೇಡ್ತಿ ನದಿಗಳ ಜೋಡಣೆ ಕಾಮಗಾರಿಯ ಕುರಿತಾದ ಮಹತ್ವದ ಸಭೆ ಜರುಗಿತು. ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿ,ಶ್ರೀಗಳು ಹಾಗೂ ಅನೇಕ ಗಣ್ಯರು ಮಾತನಾಡಿದರು. 

     ಈ ಸಂದರ್ಭದಲಿ ಮ.ನಿ.ಪ್ರ ಸದಾಶಿವ ಮಹಾಸ್ವಾಮಿಗಳು ಹುಕ್ಕೇರಿಮಠ,ಶ್ರೀ ಮ.ನಿ.ಪ್ರ ಬಸವ ಶಾಂತಲಿಂಗ ಮಹಾಸ್ವಾಮಿಗಳು, ಹೊಸಮಠ,ಶ್ರೀ ಮ.ನಿ.ಪ್ರ ಶಿವಬಸವ ಮಹಾಸ್ವಾಮಿಗಳು,ವಿರಕ್ತಮಠ, ಅಕ್ಕಿಆಲೂರ,ಶ್ರೀ ಮ.ನಿ.ಪ್ರ ಕುಮಾರ ಮಹಾಸ್ವಾಮಿಗಳು,ಅಡವಿ ಸ್ವಾಮಿಮಠ,ಸವಣೂರ ಶ್ರೀಗಳವರು ಸಾನಿಧ್ಯ ವಹಿಸಿದ್ದರು.ಮಾಜಿ ಸಂಸದರಾದ ಮಂಜುನಾಥ ಕುನ್ನೂರು,ಮಾಜಿ ಶಾಸಕರಾದ ವೀರುಪಾಕ್ಷಪ್ಪ ಬಳ್ಳಾರಿ, ಶಿವರಾಜ ಸಜ್ಜನ,ಅರುಣಕುಮಾರ ಪೂಜಾರ,ಡಿ.ಎಂ ಸಾಲಿ, ರೈತ ಸಂಘದ ಮುಖಂಡರುಗಳಾದ ಎ.ಎಸ್ ಬಳ್ಳಾರಿ,ರಾಮಣ್ಣ ಕೆಂಚೆಳ್ಳೇರ, ಶ್ರೀ ಮಲ್ಲಿಕಾರ್ಜುನ ಬಳ್ಳಾರಿ, ನಗರಸಭೆ ಅಧ್ಯಕ್ಷರಾದ ಶಶಿಕಲಾ ಮಾಳಗಿ, ಉಪಾಧ್ಯಕ್ಷರಾದ ಮಲ್ಲಿಕಾರ್ಜುನ ಸಾತೇನಹಳ್ಳಿ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.