ಅಂತರರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮ
International Human Rights Day programme
ಅಂತರರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮ
ರಾಯಬಾಗ 23 : ಮಗು ತಾಯಿಯ ಗರ್ಭಾವಸ್ಥೆಯಿಂದ ಹಿಡಿದು ವ್ಯಕ್ತಿ ಸಾವಿನವರೆಗೂ ಕಾನೂನು ಅನ್ವಯವಾಗುತ್ತದೆ ಎಂದು ಹಿರಿಯ ದಿವಾಣಿ ನ್ಯಾಯಾಧೀಶ ಜಗದೀಶ ಬಿಸೇರೊಟ್ಟಿ ಹೇಳಿದರು.ಶನಿವಾರ ರಾತ್ರಿ ರಾಯಬಾಗ ಗ್ರಾಮೀಣದ ಖೈರಕೊಡಿ (ಬಸವೇಶ್ವರನಗರ) ಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ರಾಷ್ಟ್ರೀಯ ಮಾನವ ಹಕ್ಕುಗಳ ತನಿಖಾ ಸಮಿತಿ ರಾಯಬಾಗ, ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಬ್ಬ ವ್ಯಕ್ತಿ ಕಾನೂನುಗಳ ಬಗ್ಗೆ ಅರಿತುಕೊಳ್ಳಬೇಕೆಂದರು.ಪ್ರಧಾನ ದಿವಾಣಿ ನ್ಯಾಯಾಧೀಶೆ ಪ್ರಿಯಾ ಭಟ್ಟಡ, ತಹಶೀಲ್ದಾರ ಸುರೇಶ ಮುಂಚೆ, ರಾಷ್ಟ್ರೀಯ ಮಾನವ ಹಕ್ಕುಗಳ ತನಿಖಾ ಸಮಿತಿ ಜಿಲ್ಲಾ ಕಾರ್ಯಾಧ್ಯಕ್ಷ ಸುಭಾಷ ನಾಯಿಕ, ತಾಲೂಕು ಅಧ್ಯಕ್ಷ ಬಾಹಾಸಾಹೇಬ ಖವಟಕೋಪ್ಪ, ಉಪಾಧ್ಯಕ್ಷ ಬಸವರಾಜ ಮಡಿವಾಳ, ವಕೀಲರ ಸಂಘದ ಅಧ್ಯಕ್ಷ ಪಿ.ಎಮ್.ದರೂರ, ಸಿಡಿಪಿಒ ಭಾರತಿ ಕಾಂಬಳೆ, ಎಪಿಪಿ ಹನುಮಂತ ಅಚಮಟ್ಟಿ, ಡಿ.ಎಚ್.ಯಲ್ಲಟ್ಟಿ, ಪಿ.ಎಸ್.ಕುರಬೆಟ್ಟ, ಅಜಿತ ಕುಡಚೆ, ಮಲ್ಲಿಕಾರ್ಜುನ ಜೇಡರ, ರಾಜು ಮಡಿವಾಳ, ಪ್ರಕಾಶ ಮಾಳಿ, ಹನುಮಂತ ಭಜಂತ್ರಿ, ಕೃಷ್ಣಾ ಪುಜಾರಿ, ಮಂಜುನಾಥ ವೇರಣೇಕರ, ದತ್ತಾ ಭಜಂತ್ರಿ, ರಾಜು ಕಾಂಬಳೆ, ಲಕ್ಷ್ಮಣ್ ಕೊರೆ, ಭೀಮಣ್ಣ ಜಾಗನೂರೆ, ಗೈಬಿಸಾಬ ನದಾಫ, ಅಬ್ದುಲ ಡಾಂಗೆ, ರಮೇಶ ಕುಂಬಾರ ಹಾಗೂ ರಾಷ್ಟ್ರೀಯ ಮಾನವ ಹಕ್ಕುಗಳ ತನಿಖಾ ಸಮಿತಿ ಸದಸ್ಯರು, ರಾಯಬಾಗ ಗ್ರಾಮೀಣ ಗ್ರಾಮೀಣ.ಪಂ. ಅಧ್ಯಕ್ಷರು, ಸದಸ್ಯರು ಇದ್ದರು.ಫೋಟೊ: 23 ರಾಯಬಾಗ 2ಫೋಟೊ ಶೀರ್ಷಿಕೆ: ರಾಯಬಾಗ: ಗ್ರಾಮೀಣದ ಖೈರಕೊಡಿ (ಬಸವೇಶ್ವರನಗರ) ಯಲ್ಲಿ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿರುವ ಹಿರಿಯ ದಿವಾಣಿ ನ್ಯಾಯಾಧೀಶ ಜಗದೀಶ ಬಿಸೇರೊಟ್ಟಿ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 