ಇಂಗ್ಲೀಷ್ ಭಾಷೆ ಸರಳೀಕರಿಸಿ ತಿಳಿಸುವುದು ಅಗತ್ಯ: ಅಧ್ಯಕ್ಷ ಪಾಟೀಲ
It is necessary to simplify and convey the English language: President Patil
ತಾಳಿಕೋಟಿ 18: ಇಂಗ್ಲಿಷ್ ಭಾಷೆಯನ್ನು ಅರ್ಥೈಸಿಕೊಳ್ಳುವುದು ನಮ್ಮ ಮಕ್ಕಳಿಗೆ ತೊಂದರೆಯಾಗುತ್ತದೆ ಅದರಲ್ಲೂ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತದೆ ಇಂಥಹ ಕಾರ್ಯಗಾರಗಳನ್ನು ಹಮ್ಮಿಕೊಳ್ಳುವುದರ ಮೂಲಕ ಆ ಕೆಲಸವನ್ನು ಮಾಡಬಹುದಾಗಿದೆ ಎಂದು ಎಸ್.ಎಸ್.ವಿದ್ಯಾಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಎಚ್.ಎಸ್.ಪಾಟೀಲ ಹೇಳಿದರು.
ಪಟ್ಟಣದ ಎಸ್ ಎಸ್ ವಿದ್ಯಾ ಸಂಸ್ಥೆ ಅಡಿಯಲ್ಲಿ ನಡೆಯುತ್ತಿರುವ ಸಂಗಮೇಶ್ವರ ಪ್ರೌಢಶಾಲೆಯಲ್ಲಿ ಶನಿವಾರ ಹಮ್ಮಿಕೊಂಡ ಇಂಗ್ಲಿಷ್ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ ಮುದ್ದೇಬಿಹಾಳ ವಿ.ಬಿ.ಸಿ.ಪ್ರೌಢಶಾಲೆಯ ವಾಗೇಶ ಹಿರೇಮಠ ಅವರು ತಾಲ್ಲೂಕಿನ ಎಲ್ಲಾ ಪ್ರೌಢಶಾಲೆಯ ಶಿಕ್ಷಕರು ಕಾರ್ಯಾಗಾರದ ಲಾಭವನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿ ಎಸ್.ಎಸ್.ವಿದ್ಯಾಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಎಚ್.ಎಸ್.ಪಾಟೀಲರು ಶಿಕ್ಷಕರಿಗೆ ಇಂಗ್ಲೀಷ್ ಭಾಷೆ ಕಬ್ಬಿಣದ ಕಡಲೆ ಇದ್ದ ಹಾಗೆ ,ಈ ಭಾಷೆಯನ್ನು ಸರಳಿಕರಿಸಿ ವಿದ್ಯಾರ್ಥಿಗಳಿಗೆ ತಿಳಿಸಬೇಕು ಎಂದು ಹೇಳಿದರು.
ಅಧ್ಯಕ್ಷ ಎಚ್. ಎಸ್.ಪಾಟೀಲರಿಗೆ ವಿಷಯ ವೇದಿಕೆ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಎಸ್.ಎಸ್. ಠಾಣೇದರವರು ಮಿಶನ್ 45+ ಕುರಿತು ವಿಶ್ಲೇಸಿದರು. ಕಾರ್ಯಾಗಾರದ ವೇದಿಕೆಯಲ್ಲಿ ಪ್ರೌಢಶಾಲೆಯ ಸಹಶಿಕ್ಷಕರ ಸಂಘದ ಅಧ್ಯಕ್ಷರು ಎನ.ಬಿ ಪಿಂಜಾರ, ವಾಯ್.ಬಿ.ಬಡಿಗೇರ ಉಪಸ್ಥಿತರಿದ್ದರು. ಮುದ್ದೆಬಿಹಾಳ ಮತ್ತು ತಾಳಿಕೋಟಿ ತಾಲೂಕಿನ ಪ್ರೌಢಶಾಲೆಯ ಎಲ್ಲಾ ಇಂಗ್ಲಿಷ್ ಭಾಷೆಯ ಶಿಕ್ಷಕರು ಹಾಜರಿದ್ದರು. ಶಿಕ್ಷಕರಾದ ಆನಂದ ಹೂಗಾರ ವಂದಿಸಿದರು. ಎಸ್.ಸಿ.ಗುಡಗುಂಟಿ. ನಿರೂಪಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 