ಜೀತ ಪದ್ಧತಿಯನ್ನು ನಿರ್ಮೂಲನೆ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ
It is the duty of all of us to abolish the system of serfdom
ಶಿರಹಟ್ಟಿ 13 : ಸಮಾಜದಲ್ಲಿ ಹಲವಾರು ರೂಪಗಳಲ್ಲಿ ಇನ್ನೂ ಜೀತ ಪದ್ಧತಿಯು ಜೀವಂತವಾಗಿದೆ. ಈ ಜೀತ ಪದ್ಧತಿಯನ್ನು ನಿರ್ಮೂಲನೆ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಸತೀಶ ಎಂ. ಸದಸ್ಯ ಕಾರ್ಯದರ್ಶಿಗಳು, ತಾಲೂಕ ಕಾನೂನು ಸೇವಾ ಸಮಿತಿ, ಲಕ್ಷೇಶ್ವರ ಹಾಗೂ ದಿವಾಣಿ ನ್ಯಾಯಾಧೀಶರು ಅವರು ಹೇಳಿದರು.ಅವರು ಶುಕ್ರವಾರ ಪಟ್ಟಣದ ಎಫ್.ಎಂ.ಡಬಾಲಿ ಪ್ರೌಢಶಾಲೆಯಲ್ಲಿ ನೆಡೆದ ಜೀತ ಪದ್ಧತಿ ನಿರ್ಮೂಲನಾ ದಿನದ ಕುರಿತು ನೆಡೆದ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡುತ್ತಾ, ಜೀತ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವುದಕ್ಕೆ ಸರ್ಕಾರ, ನ್ಯಾಯಾಂಗ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕರು ಒಟ್ಟಾಗಿ ಸಹಕಾರ ನೀಡಬೇಕು ಎಂದರು.ಶಾಲಾ ಮಕ್ಕಳಿಗೆ ಉದ್ದೇಶಿಸಿ ಮಾತನಾಡಿದ ಅವರು, ನೀವು ಭವಿಷ್ಯದ ನಾಗರಿಕರು, ಯಾವುದೇ ರೀತಿಯ ಜೀತ ಪದ್ಧತಿಯ ಪ್ರಕರಣಗಳು ನಿಮ್ಮ ಗಮನಕ್ಕೆ ಬಂದಲ್ಲಿ, ಸಂಬಂಧಿಸಿದ ಇಲಾಖೆಗಳು ಹಾಗೂ ಸಹಾಯವಾಣಿಗಳಿಗೆ ಮಾಹಿತಿ ನೀಡಬೇಕು. ಇದರಿಂದ ಜೀತ ಪದ್ಧತಿಗೆ ಒಳಗಾದವರಿಗೆ ನ್ಯಾಯ ದೊರಕುವಂತ ವ್ಯವಸ್ಥೆ ನಿರ್ಮಾಣವಾಗುತ್ತದೆ ಎಂದು ಹೇಳಿದರು.ನಂತರ ಸಮಾಜವನ್ನು ಉತ್ತಮವಾಗಿ ಕಟ್ಟುವಲ್ಲಿ ಹಾಗೂ ಸಮಾಜದ ಕೆಟ್ಟ ಪಿಡುಗುಗಳನ್ನು ನಿರ್ಮೂಲನೆ ಮಾಡುವಲ್ಲಿ ಮಕ್ಕಳು ಹಾಗೂ ಸಮಾಜದ ನಾಗರಿಕರು ಕೈಜೋಡಿಸಬೇಕು ಎಂದು ನ್ಯಾಯಾಧೀಶರು ಸಭೆಯಲ್ಲಿ ಹಾಜರಿದ್ದ ಎಲ್ಲಾ ಮಕ್ಕಳು ಹಾಗೂ ಜನತೆಗೆ ಕರೆ ನೀಡಿದರು. ಈ ವೇಳೆಯಲ್ಲಿ ಆರ್.ಎಫ್.ಬಟಗುರಕಿ, ಮುಖ್ಯೋಪಾಧ್ಯಾಯರು, ಎಫ್.ಎಂ.ಡಬಾಲಿ ಪ್ರೌಢಶಾಲೆ ಕು. ಹೀನಾಕೌಸರ್ ಗಂಜಿಹಾಳ, ಸಹಾಯಕ ಸರ್ಕಾರಿ ಅಭಿಯೋಜಕರು, ಲಕ್ಷೇಶ್ವರ, ಈರ್ಪ ರಿತ್ತಿ, ಆರಕ್ಷಕ ಉಪ ನೀರೀಕ್ಷಕರು,ಎಸ್.ವೈ. ಗೊಬ್ಬರಗುಂಪಿ, ಅಧ್ಯಕ್ಷರು, ವಕೀಲರ ಸಂಘ, ಶಿರಹಟ್ಟಿ, ಹಾಗೂ ಶಾಲೆಯ ಎಲ್ಲ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 