ಧ್ವನಿಯಿಲ್ಲದವರಿಗೆ ಧ್ವನಿಯಾಗುವುದೇ ಮಾಧ್ಯಮಗಳ ಜವಾಬ್ದಾರಿ: ಮುಲ್ಲಾರ
ಲೋಕದರ್ಶನ ವರದಿ
ವಿಜಯಪುರ 14: ಸಮಾಜ ಬಿಟ್ಟು ಜನರಿಲ್ಲ. ಜನರನ್ನು ಬಿಟ್ಟು ಮಾಧ್ಯಮಗಳಿಲ್ಲ ಅದ್ದರಿಂದ ದ್ವನಿಯಿಲ್ಲದವರಿಗೆ ದ್ವನಿಯಾಗುವುದೇ ಮಾಧ್ಯಮಗಳ ಜವಾಬ್ದಾರಿಯೆಂದು ದೂರದರ್ಶನ ಮತ್ತು ಆಕಾಶವಾಣಿಯ ಕೊಪ್ಪಳ ಜಿಲ್ಲಾ ವರದಿಗಾರಾದ ರಾಜಸಾಬು ಎಂ. ಮುಲ್ಲಾರ ಹೇಳಿದರು.
ನಗರದ ಸರಕಾರಿ ಪ್ರಥಮ ದಜರ್ೆ ಮಹಿಳಾ ಕಾಲೇಜಿನಲ್ಲಿ ಅಂತರಿಕ ಗುಣಮಟ್ಟ ಭರವಸೆಯ ಕೋಶದ ವತಿಯಿಂದ ನಡೆದ ವಿಚಾರ ಸಂಕೀರಣದಲ್ಲಿ ವಿಶೇಷ ಉಪನ್ಯಾಸದಲ್ಲಿ ಮಾತನಾಡಿದರು.
ವಿದ್ಯಾಥರ್ಿಗಳು ತುಲನಾತ್ಮಕವಾಗಿ ಪತ್ರಿಕೆಗಳನ್ನು ಓದಬೇಕು ಹೆಚ್ಚಿನ ಜ್ಞಾನವನ್ನು ಬೆಳೆಸಿಕೊಳ್ಳಬೇಕು. ಪತ್ರಕರ್ತರು ಸಮಾಜದ ಸೂಕ್ಷ್ಮತೆಯನ್ನು ಅರಿತುಕೊಳ್ಳಬೇಕು ಮಾನವೀಯ ಗುಣಗಳನ್ನು ಹೊಂದಿರಬೇಕು. ಮಾಧ್ಯಮಗಳು ಜನರ ವಿಶ್ವಾಸಾರ್ಹತೆಯನ್ನು ಕಲೆದಕೊಳ್ಳಬಾರದು. ಸಮಾಜದ ಹಿತದೃಷ್ಟಿಯಿಂದ ಸುದ್ದಿಗಳನ್ನು ಟಿ.ವಿ ಗಳಲ್ಲಿ ಪ್ರಸಾರ ಮಾಡಬೇಕು ಅನ್ಯಾಯಗಳ ಕುರಿತು ಮಾಧ್ಯಮಗಳ ಮೂಲಕ ಸಮಾಜಕ್ಕೆ ತಿಳಿಸಬೇಕುಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ಕಾಲೇಜಿನ ಪ್ರಾಂಶುಪಾಲ ಡಾ. ಗಣಪತಿ ಕೆ ಲಮಾಣಿ ವಹಿಸಿದ್ದರು. ವೇದಿಕೆಯಲ್ಲಿ ಡಾ. ನರಸಿಂಹ ಗುಂಜಹಳ್ಳಿ, ಬಸವರಾಜ ಭಂಡಾರಿ ಇತರರು ಇದ್ದರು. ಲಕ್ಷ್ಮಿ ಕವಲೂರು ನಿರೂಪಿಸಿದರು. ಗೀತಾ ವಂದಿಸಿದರು. ಪವಿತ್ರ ಪ್ರಾರ್ಥನೆ ಗೀತೆ ಹಾಡಿದರು. ಲಕ್ಷ್ಮಿ ಸ್ವಾಗತಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 