'ವಿಷಯಗಳು ಸಿಗುತ್ತಿಲ್ಲ ಅದಕ್ಕೆ ನನ್ನ ತಾಯಿಯನ್ನು ಕೈ ಟೀಕಿಸುತ್ತಿದೆ'
ಭೋಪಾಲ್ 24: ಕಾಂಗ್ರೆಸ್ ಗೆ ನನ್ನ ವಿರುದ್ಧ ಮಾತನಾಡಲು ವಿಷಯಗಳೇ ಸಿಗುತ್ತಿಲ್ಲ. ಅದಕ್ಕಾಗಿ ಈಗ ನನ್ನ ತಾಯಿ ಟೀಕಿಸುತ್ತಿದ್ದಾರೆ. ಇದು ಕಾಂಗ್ರೆಸ್ ನಾಯಕರ ಅಸಹಾಯಕತೆಯನ್ನು ತೋರಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿರುಗೇಟು ನೀಡಿದ್ದಾರೆ.
ಮಧ್ಯಪ್ರದೇಶ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಯರ್ಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್ ಮುಖಂಡ ರಾಜ್ ಬಬ್ಬರ್ ಅವರು ರೂಪಾಯಿ ಮೌಲ್ಯವನ್ನು ಪ್ರಧಾನಿ ಮೋದಿ ತಾಯಿಯ ವಯ್ಯಸಿಗೆ ಹೋಲಿಕೆ ಮಾಡಿ ಟೀಕಿಸಿದ್ದರು. ಇದಕ್ಕೆ ತಿರುಗೇಟು ನೀಡಿರುವ ಪ್ರಧಾನಿ, ಕಾಂಗ್ರೆಸ್ ಗೆ ನನ್ನನ್ನು ಎದುರಿಸಲು ತಾಕತ್ತಿಲ್ಲ. ಅದಕ್ಕಾಗಿ ತಮ್ಮ ತಾಯಿಯನ್ನು ನಿಂದಿಸುವ ಮಾತನಾಡುತ್ತಿದ್ದಾರೆ ಎಂದರು.
ಕಾಂಗ್ರೆಸ್ ನಾಯಕರಿಗೆ ನಮ್ಮ ವಿರುದ್ಧ ಮಾತನಾಡಲು ಬೇರೆ ವಿಷಯಗಳು ಸಿಗುತ್ತಿಲ್ಲ. ಚುನಾವಣೆಯಲ್ಲಿ ಟೆವಣಿಯನ್ನೂ ಕಳೆದುಕೊಳ್ಳುವ ಭೀತಿ ಕಾಂಗ್ರೆಸ್ ಗೆ ಆರಂಭವಾಗಿದೆ ಹಾಗಾಗಿ ಈಗ ಬೇರೆಯವರ ತಾಯಿಯ ವಿಷಯವನ್ನು ಎತ್ತಿಕೊಂಡು ಟೀಕಿಸುತ್ತಿದ್ದಾರೆ. ಕಾಂಗ್ರೆಸ್ ನ ಕೀಳುಮಟ್ಟದ ರಾಜಕಾರಣವನ್ನು ತಿರಸ್ಕರಿಸುವಂತೆ ಕರೆ ನೀಡಿದರು. ರಾಜ್ಯದಲ್ಲಿ ಈ ಬಾರಿಯೂ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ. ಕಳೆದ ನಾಲ್ಕು ವರ್ಷಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಕೈಗೊಂಡಿರುವ ಅಭಿವೃದ್ಧಿಯ ಜತೆಗೆ ಕಳೆದ ನಾಲ್ಕು ದಶಕಗಳಿಂದ ಕಾಂಗ್ರೆಸ್ ಕೈಗೊಂಡಿರುವ ಅಭಿವೃದ್ಧಿಯ ಕುರಿತು ಜನರು ಹೋಲಿಕೆ ಮಾಡಿ ನೋಡಿ. ಕಾಂಗ್ರೆಸ್ ನ ದುರಾಡಳಿತ, ಬಿಜೆಪಿಯ ಅಭಿವೃದ್ಧಿ ಅರಿವಾಗುತ್ತದೆ ಎಂದರು.
ನಮ್ಮ ಸಕರ್ಾರಕ್ಕೆ ಈ ದೇಶದ 125 ಕೋಟಿ ಜನ ಹೈಕಮಾಂಡ್. ನಮ್ಮದು ಮೇಡಂನಿಂದ ರಿಮೋಟ್ ಕಂಟ್ರೋಲ್ ಸಕರ್ಾರ ಅಲ್ಲ ಎಂದು ಪರೋಕ್ಷವಾಗಿ ಯುಪಿಎ ಅಧಿನಾಯಕಿ ಸೋನಿಯಾ ಗಾಂಧಿ ಅವರ ವಿರುದ್ಧ ವಾಗ್ದಾಳಿ ನಡೆಸಿದರು. ಮೇಡಂ ಸಕರ್ಾರದ ಅವಧಿಯಲ್ಲಿ ಶ್ರೀಮಂತರಿಗಾಗಿ ಬ್ಯಾಂಕ್ ಗಳ ಬೊಕ್ಕಸಗಳನ್ನು ಖಾಲಿ ಮಾಡಿದ್ದರು. ಆದರೆ ನಮ್ಮ ಸಕರ್ಾರ ಅಗತ್ಯವಿರುವ ಯುವಕರಿಗೆ ಸಾಲ ನೀಡುತ್ತಿದೆ ಎಂದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 