ಜ. 28 ರಿಂದ ಬಳಗಾನೂರಿನಲ್ಲಿ “ಮಹಾತ್ಮರ ಜೀವನ ದರ್ಶನ ಪ್ರವಚನ” ಪ್ರಾರಂಭೋತ್ಸವ
J. Inauguration of “Mahatma Jeevan Darshan Pravachana” at Balaganur from 28th
ಜ. 28 ರಿಂದ ಬಳಗಾನೂರಿನಲ್ಲಿ “ಮಹಾತ್ಮರ ಜೀವನ ದರ್ಶನ ಪ್ರವಚನ” ಪ್ರಾರಂಭೋತ್ಸವ
ಗದಗ 25 : ಮೌನಯೋಗಿ ಚಿಕೇನಕೊಪ್ಪದ ಶ್ರೀ ಚನ್ನವೀರ ಶರಣರ 30 ನೇ ಪುಣ್ಯಸ್ಮರಣೋತ್ಸವ ಹಾಗೂ ಜಾತ್ರಾ ಮಹೋತ್ಸವದ ಅಂಗವಾಗಿ ಇದೇ ಜ. 28 ರಿಂದ ಫೆ. 3 ರ ವರೆಗೆ ಪ್ರತಿದಿನ ಸಂಜೆ 7 ಗಂಟೆಗೆ ಮುದಗಲ್-ತಿಮ್ಮಾಪೂರ ಕಲ್ಯಾಣ ಆಶ್ರಮದ ಶ್ರೀಮಹಾಂತೇಶ್ವರ ಶ್ರೀಮಠದ ಪೂಜ್ಯಶ್ರೀ ಮಹಾಂತ ಸ್ವಾಮಿಗಳಿಂದ “ಮಹಾತ್ಮರ ಜೀವನ ದರ್ಶನ’ ಪ್ರವಚನ ಜರಗುವದು.
ಜ. 28 ರಂದು ಸಂಜೆ 7 ಗಂಟೆಗೆ ಮಹಾತ್ಮರ ಜೀವನ ದರ್ಶನ ಪ್ರವಚನ ಪ್ರಾರಂಭೋತ್ಸವದ ಉದ್ಘಾಟನೆಯನ್ನು ಅಡ್ನೂರ-ಗದಗ-ರಾಜೂರ- ಬ್ರಹನ್ಮಠದ ಪೂಜ್ಯಶ್ರೀ ಅಭಿನವ ಪಂಚಾಕ್ಷರ ಶಿವಾಚಾರ್ಯ ಮಹಾಸ್ವಾಮಿಗಳವರು ನೆರವೇರಿಸುವರು.
ಸುಕ್ಷೇತ್ರ ಬಳಗಾನೂರಿನ ಪೂಜ್ಯಶ್ರೀ ಶಿವಶಾಂತವೀರ ಶರಣರು ನೇತೃತ್ವ ವಹಿಸುವರು. ಹುಬ್ಬಳ್ಳಿಯ ಶಂಕ್ರಯ್ಯ ಗುರುಮಠ ಸಂಗೀತ ಸೇವೆ ನೀಡುವರು. ಗದುಗಿನ ಬಸವರಾಜ ಹೊನ್ನಿಗನೂರ ತಬಲಾ ಸಾಥ್ ನೀಡುವರು. ಮೈಸೂರಿನ ವಿದ್ವಾನ್ ರವಿಕುಮಾರ ಅವರು ವಾಯಲಿನ್ ನುಡಿಸುವರು. ಪ್ರತಿದಿನ ಪ್ರವಚನದ ನಂತರ ತುಲಾಬಾರ ಸೇವೆ ಹಾಗೂ ಮಹಾಪ್ರಸಾದ ನೆರವೇರುವದು ಎಂದು ಶ್ರೀಮಠದ ಪ್ರಕಟಣೆ ನೀಡಿಸಿದೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 