ಜ. 28 ರಿಂದ ಬಳಗಾನೂರಿನಲ್ಲಿ “ಮಹಾತ್ಮರ ಜೀವನ ದರ್ಶನ ಪ್ರವಚನ” ಪ್ರಾರಂಭೋತ್ಸವ
J. Inauguration of “Mahatma Jeevan Darshan Pravachana” at Balaganur from 28th
ಜ. 28 ರಿಂದ ಬಳಗಾನೂರಿನಲ್ಲಿ “ಮಹಾತ್ಮರ ಜೀವನ ದರ್ಶನ ಪ್ರವಚನ” ಪ್ರಾರಂಭೋತ್ಸವ
ಗದಗ 25 : ಮೌನಯೋಗಿ ಚಿಕೇನಕೊಪ್ಪದ ಶ್ರೀ ಚನ್ನವೀರ ಶರಣರ 30 ನೇ ಪುಣ್ಯಸ್ಮರಣೋತ್ಸವ ಹಾಗೂ ಜಾತ್ರಾ ಮಹೋತ್ಸವದ ಅಂಗವಾಗಿ ಇದೇ ಜ. 28 ರಿಂದ ಫೆ. 3 ರ ವರೆಗೆ ಪ್ರತಿದಿನ ಸಂಜೆ 7 ಗಂಟೆಗೆ ಮುದಗಲ್-ತಿಮ್ಮಾಪೂರ ಕಲ್ಯಾಣ ಆಶ್ರಮದ ಶ್ರೀಮಹಾಂತೇಶ್ವರ ಶ್ರೀಮಠದ ಪೂಜ್ಯಶ್ರೀ ಮಹಾಂತ ಸ್ವಾಮಿಗಳಿಂದ “ಮಹಾತ್ಮರ ಜೀವನ ದರ್ಶನ’ ಪ್ರವಚನ ಜರಗುವದು.
ಜ. 28 ರಂದು ಸಂಜೆ 7 ಗಂಟೆಗೆ ಮಹಾತ್ಮರ ಜೀವನ ದರ್ಶನ ಪ್ರವಚನ ಪ್ರಾರಂಭೋತ್ಸವದ ಉದ್ಘಾಟನೆಯನ್ನು ಅಡ್ನೂರ-ಗದಗ-ರಾಜೂರ- ಬ್ರಹನ್ಮಠದ ಪೂಜ್ಯಶ್ರೀ ಅಭಿನವ ಪಂಚಾಕ್ಷರ ಶಿವಾಚಾರ್ಯ ಮಹಾಸ್ವಾಮಿಗಳವರು ನೆರವೇರಿಸುವರು.
ಸುಕ್ಷೇತ್ರ ಬಳಗಾನೂರಿನ ಪೂಜ್ಯಶ್ರೀ ಶಿವಶಾಂತವೀರ ಶರಣರು ನೇತೃತ್ವ ವಹಿಸುವರು. ಹುಬ್ಬಳ್ಳಿಯ ಶಂಕ್ರಯ್ಯ ಗುರುಮಠ ಸಂಗೀತ ಸೇವೆ ನೀಡುವರು. ಗದುಗಿನ ಬಸವರಾಜ ಹೊನ್ನಿಗನೂರ ತಬಲಾ ಸಾಥ್ ನೀಡುವರು. ಮೈಸೂರಿನ ವಿದ್ವಾನ್ ರವಿಕುಮಾರ ಅವರು ವಾಯಲಿನ್ ನುಡಿಸುವರು. ಪ್ರತಿದಿನ ಪ್ರವಚನದ ನಂತರ ತುಲಾಬಾರ ಸೇವೆ ಹಾಗೂ ಮಹಾಪ್ರಸಾದ ನೆರವೇರುವದು ಎಂದು ಶ್ರೀಮಠದ ಪ್ರಕಟಣೆ ನೀಡಿಸಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 