ಜಮಖಂಡಿ ತುಬಚಿ ಶಿವಲಿಂಗೇಶ್ವರ ಜಾತ್ರಾ ಮಹೋತ್ಸವ
Jamkhandi Tubachi Shivalingeshwara Fair Festival
ಜಮಖಂಡಿ 22: ತಾಲೂಕಿನ ತುಬಚಿ ಶಿವಲಿಂಗೇಶ್ವರ ಮಠದ ಆವರಣದಲ್ಲಿ ಡಾ, ಅಲ್ಲಮಪ್ರಭು ಶ್ರೀಗಳು ದಿವ್ಯ ಸಾನ್ನಿಧ್ಯದಲ್ಲಿ ಮಠದ ನೂತನ ಶಿಲಾಮಂಟಪ ಹಾಗೂ ಗುರುಭವನ ಉದ್ಘಾಟನೆ ಮತ್ತು ಮಾ 20.ರಿಂದ ಏ,3 ರವರೆಗೆ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯು ಜರುಗಿತು.
ಮಠಗಳು ಕೇವಲ ಕಲ್ಲು,ಮಣ್ಣಿನ ಕಟ್ಟಡವಲ್ಲ, ಅದು ಭಕ್ತಿ ಮತ್ತು ಸಂಸ್ಕಾರದ ಕೇಂದ್ರವಾಗಿದೆ. ನೂತನವಾಗಿ ನಿರ್ಮಿಸಲಾದ ಶಿಲಾಮಂಟಪ ಹಾಗೂ ಗುರುಭವನ ಕಟ್ಟಡವು ಲೋಕಾರೆ್ಣಯಾಗುತ್ತಿರುವುದು ಡಾ.ಅಲ್ಲಮಪ್ರಭು ಮಹಾಸ್ವಾಮಿಗಳ ಶ್ರಮ ಹಾಗೂ ಭಕ್ತರೆಲ್ಲರ ಸಹಕಾರ ಫಲವಾಗಿದೆ ಎಂದು ಶೇಗುಣಸಿಯ ಮಹಾಂತ ಶ್ರೀಗಳು ಹೇಳಿದರು. ಜಾತ್ರಾ ಮಹೋತ್ಸವವು ಗ್ರಾಮದ ಐಕ್ಯತೆ ಮತ್ತು ಸೌಹಾರ್ದತೆಯ ಪ್ರತೀಕ.
ಭಕ್ತರೆಲ್ಲರೂ ಒಗ್ಗೂಡಿ ಈ ಧಾರ್ಮಿಕ ಕಾರ್ಯಕ್ರಮವನ್ನು ಶಿಸ್ತುಬದ್ಧವಾಗಿ ಮತ್ತು ಶ್ರದ್ಧಾಭಕ್ತಿಯಿಂದ ನೆರವೇರಿಸಬೇಕು. ಜಾತ್ರಾ ಮಹೋತ್ಸವ ರಥೋತ್ಸವ, ಪಲ್ಲಕ್ಕಿ ಸೇವೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ರೂಪುರೇಷೆ ಸಿದ್ಧಪಡಿಸುವುದು.ದಾಸೋಹ ವ್ಯವಸ್ಥೆ ಆಗಮಿಸುವ ಭಕ್ತಾದಿಗಳಿಗೆ ಪ್ರಸಾದ ನಿಲಯ ಮತ್ತು ಕುಡಿಯುವ ನೀರಿನ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಡಾ, ಅಲ್ಲಮಪ್ರಭು ಶ್ರೀಗಳು ಹೇಳಿದರು
ಫೋಟೋ : ಜಮಖಂಡಿ ತಾಲೂಕಿನ ತುಬಚಿ ಗ್ರಾಮದ ಶಿವಲಿಂಗೇಶ್ವರ ಮಠದ ನೂತನ ಶಿಲಾಮಂಟಪ ಹಾಗೂ ಗುರುಭವನ ಉದ್ಘಾಟನೆ ಮತ್ತು ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆಯಲ್ಲಿ ಡಾ, ಅಲ್ಲಮಪ್ರಭು ಶ್ರೀಗಳು ಹಾಗೂ ಮಹಾಂತ ಶ್ರೀಗಳಿಗೆ ಸನ್ಮಾನಿಸಲಾಯಿತು,
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 