ಜ. 25ರಂದು ಚನ್ನವೀರ ಶರಣರ ಪುಣ್ಯಸ್ಮರಣೋತ್ಸವ ಹಾಗೂ ಜಾತ್ರಾ ಮಹೋತ್ಸವ
Jan. 25th Channaveera Sharan's commemoration and fair festival
ಗದಗ 21: ಮೌನಯೋಗಿ ಚಿಕೇನಕೊಪ್ಪದ ಶ್ರೀ ಚನ್ನವೀರ ಶರಣರ 31 ನೇ ಪುಣ್ಯಸ್ಮರಣೋತ್ಸವ ಹಾಗೂ ಜಾತ್ರಾ ಮಹೋತ್ಸವ ಇದೇ ಜ.16 ರಿಂದ ಜ. 26 ರ ವರೆಗೆ ಜರುಗಲಿದೆ. ಜ. 25 ರಂದು ಸಂಜೆ 5 ಗಂಟೆಗೆ ಮಹಾರಥೋತ್ಸವ ಜರುಗುವದು ಮತ್ತು ಜಾತ್ರಾ ಮಹೋತ್ಸವದ ಅಂಗವಾಗಿ ಮಹಾತ್ಮರ ಜೀವನ ದರ್ಶನ ಪ್ರವಚನ, ಮಹಾರಥೋತ್ಸವ, ಲಘು ರಥೋತ್ಸವ, ಜಾನಪದ ಕಲಾಮೇಳ, ಸಾಮೂಹಿಕ ವಿವಾಹಗಳು, ಸುಮಂಗಲೆಯರಿಗೆ ಉಡಿ ತುಂಬುವದು, ತುಲಾಬಾರ, ಧಾರ್ಮಿಕ ಚಿಂತನಾಗೋಷ್ಠಿ ಹಾಗೂ ಶರಣಶ್ರೀ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಸುಕ್ಷೇತ್ರ ಬಳಗಾನೂರಿನ ಚಿಕೇನಕೊಪ್ಪದ ಶ್ರೀ ಚನ್ನವೀರ ಶರಣರ ಮಠದ ಪೂಜ್ಯಶ್ರೀ ಶಿವಶಾಂತವೀರ ಶರಣರು ಹೇಳಿದರು.
ಜ.26 ರಂದು ಸಂಜೆ 5 ಗಂಟೆಗೆ ಕಡುಬಿನ ಕಾಳಗ ಹಾಗ ಶರಣರ ಬೆಳ್ಳಿಮೂರ್ತಿ ಉತ್ಸವ ಜರುಗುವದು. ಸುಕ್ಷೇತ್ರ ಬಳಗಾನೂರ ಗ್ರಾಮದ ಪ್ರಮುಖ ಬೀದಿಗಳಲ್ಲಿ ಚನ್ನವೀರ ಶರಣರ ಬೆಳ್ಳಿಮೂರ್ತಿ ಉತ್ಸವ ಜರುಗುವದು. ನಂತರ ಶ್ರೀಮಠದಲ್ಲಿ ಕಡುಬಿನ ಕಾಳಗ ಜರುಗುವದು.ಸಂಜೆ 6 ಗಂಟೆಗೆ ಬೆಂಗಳೂರಿನ ಸರಿಗಮಪ ಎಂಟಟ್ರೇನರ್ಸ ನ ಗಾಯಕರಾದ ಡಾ.ಶ್ರೀರಾಮ ಕಾಸರ್ ಮತ್ತು ತಂಡದವರಿಂದ ರಸಮಂಜರಿ ಹಾಗೂ ಚಲನಚಿತ್ರ ನಟರಾದ ಪ್ರವೀಣ ಗಸ್ತಿ ಮತ್ತು ಕಾಮಿಡಿ ಕಿಲಾಡಿಗಳಿಂದ ಹಾಸ್ಯ ಸಂಜೆ ಜರುಗುವದು.
ರಾತ್ರಿ 9 ಗಂಟೆಗೆ ಸಿಡಿಮದ್ದು ಸುಡುವ ಆಕರ್ಷಣಿಯ ಕಾರ್ಯಕ್ರಮ ಜರಗುವುದು ರಾತ್ರಿ 10 ಗಂಟೆಗೆ ಬಳ್ಳಾರಿಯ ಅಭಿನಯ ಕಲಾಕೇಂದ್ರ ಅವರಿಂದ ಅಲ್ಲಿಪುರದ ಮಹಾದೇವ ತಾತನವರ ಭಕ್ತಿ ಪ್ರಧಾನವಾದ ನಾಟಕ ಪ್ರದರ್ಶನವಾಗಲಿದೆ ಎಂದು ಪೂಜ್ಯಶ್ರೀಗಳು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಎ.ಎನ್.ನಾಗರಳ್ಳಿ, ವಿ.ಬಿ.ಪೊಲೀಸಪಾಟೀಲ, ಎಂ.ಬಿ.ಸಿಕ್ಕೆದೇಸಾಯಿ, ವಿ.ಎಸ್.ಹಿರೇಮಠ, ಎಸ್.ಬಿ.ಪಾಟೀಲ, ಎಸ್.ಎಸ್.ಪಾಟೀಲ,ಶಿವಲಿಂಗಯ್ಯ ಶಾಸ್ತ್ರಿಗಳು ಹಿರೇಮಠ ಸಿದ್ದಾಪೂರ, ವಸಂತಮೇಟಿ, ಶೇಖಣ್ಣ ಗದ್ದಿಕೇರಿ, ಮನ್ನಾಪೂರ, ಗೌರಿಪೂರ, ವೈ.ಬಿ.ಡೊಳ್ಳಿನ, ಎಚ್.ಎಸ್.ವೆಂಕಟಾಪೂರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 