ಪೂರಕ ಪೌಷ್ಠಿಕ ಆಹಾರ ತಯಾರಿಕಾ ಕೇಂದ್ರಕ್ಕೆ ನ್ಯಾಯಾಧೀಶರ ಭೇಟಿ
Judge's visit to Supplemental Nutrition Food Processing Center
ಪೂರಕ ಪೌಷ್ಠಿಕ ಆಹಾರ ತಯಾರಿಕಾ ಕೇಂದ್ರಕ್ಕೆ ನ್ಯಾಯಾಧೀಶರ ಭೇಟಿ
ಧಾರವಾಡ ಫೆ.24: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಪಿ.ಎಫ್.ದೊಡ್ಡಮನಿ ಅವರು (ಫೆ. 21) ರಂದು ಅಂಗನವಾಡಿ ಕೇಂದ್ರಗಳಿಗೆ ಆಹಾರ ಪೂರೈಸುವ ಘಟಕಗಳಾದ ಲಕಮನಹಳ್ಳಿ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಎಂ.ಎಸ್.ಪಿ.ಸಿ ಮತ್ತು ತಾರಿಹಾಳ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಮಹಿಳಾ ಪೂರಕ ಪೌಷ್ಟಿಕ ಆಹಾರ ತಯಾರಿಕಾ ಕೇಂದ್ರಕ್ಕೆ ಅನೀರೀಕ್ಷಿತ ಭೇಟಿ ನೀಡಿ, ಪರೀಶೀಲಿಸಿದರು. ಸರಕಾರದಿಂದ ಬಿಡುಗಡೆಯಾದ ಆಹಾರ ಧಾನ್ಯಗಳ ವಿವರ ಮತ್ತು ಅಂಗನವಾಡಿ ಕೇಂದ್ರಗಳಿಗೆ ಪೂರೈಸಿದ ವಿವರವನ್ನು ನೀಡಲು ಸೂಚಿಸಲಾಯಿತು. ನಂತರ ಉಣಕಲ್ ಕ್ರಾಸಿನಲ್ಲಿರುವ ಸರ್ಕಾರಿ ಬಾಲಕರ ಬಾಲ ಮಂದಿರ, ಮಂದಮತಿ ಅನುಪಾಲನಾ ಸಂಸ್ಥೆ, ಮನೋವಿಕಲ ಬಾಲಕಿಯರ ಸರ್ಕಾರಿ ಬಾಲ ಮಂದಿರ, ಗಂಟೆಕೇರಿ ಬಾಲಕಿಯರ ಸರಕಾರಿ ಬಾಲ ಮಂದಿರ ಹಾಗೂ ಹುಬ್ಬಳ್ಳಿಯ ಉಪ ಕಾರಾಗೃಹಕ್ಕೆ, ರಾಜ್ಯ ಮಹಿಳಾ ನಿಲಕ್ಕೆ ಅನೀರೀಕ್ಷಿತ ಭೇಟಿ ನೀಡಿ, ಪರೀಶೀಲಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 