ನ್ಯಾಯಾಂಗ ನಿಂದನೆ ಆರೋಪ: ಸುಪ್ರೀಂಗೆ ಹೊಸ ಅಫಿಡವಿಟ್ ಸಲ್ಲಿಸಿದ ರಾಹುಲ್
ನವದೆಹಲಿ, ಏ 29 ರಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದಕ್ಕೆ ಸಂಬಂಧಿಸಿ ಸುಪ್ರೀಂಕೋರ್ಟ್ ನೀಡಿದ್ದ ಹೇಳಿಕೆಯನ್ನು ತಪ್ಪಾಗಿ ಅಥರ್ೆಸಿಕೊಂಡು, ನ್ಯಾಯಾಂಗ ನಿಂದನೆ ಆರೋಪಕ್ಕೆ ಗುರಿಯಾಗಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಸೋಮವಾರ ಸುಪ್ರೀಂಕೋಟರ್್ ಗೆ ಹೊಸ ಅಫಿಡವಿಟ್ ಸಲ್ಲಿಸಿದ್ದಾರೆ.
ರಫೆಲ್ ವಿವಾದಕ್ಕೆ ಸಂಬಂಧಿಸಿ ಸುಪ್ರೀಂ ಕೋಟರ್್ ನೀಡಿದ್ದ ಆದೇಶವನ್ನು ಬಳಸಿಕೊಂಡು ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು 'ಚೌಕಿದಾರ್ ಚೋರ್ ಹೈ' ಎಂದು ಟೀಕಿಸುವ ಮೂಲಕ ನ್ಯಾಯಾಂಗ ನಿಂದನೆ ಮಾಡಿರುವುದಾಗಿ ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ಕೋಟರ್್ ಮೆಟ್ಟಿಲೇರಿದ್ದರು.
ಈ ಸಂಬಂಧ ಸುಪ್ರೀಂಕೋಟರ್್ ಸೂಚನೆಯಂತೆ ರಾಹುಲ್ ಗಾಂಧಿ ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಿ, 'ಚೌಕಿದಾರ್ ಚೋರ್ ಹೈ' ಘೊಷಣೆಗೆ ವಿಷಾದ ವ್ಯಕ್ತಪಡಿಸುವುದಾಗಿ ತಿಳಿಸಿದ್ದರು. ಆದರೆ ಕ್ಷಮೆ ಕೋರಿರಲಿಲ್ಲ. ಮತ್ತು ತಮ್ಮ ಹೇಳಿಕೆಯನ್ನು ರಾಜಕೀಯವಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ್ದರು.
ಆದರೆ ತಮ್ಮ ವಿರುದ್ಧದ ನ್ಯಾಯಾಂಗ ನಿಂದನೆ ಆರೋಪವನ್ನು ಕೈಬಿಡಬೇಕೆಂಬ ರಾಹುಲ್ ಗಾಂಧಿ ಮನವಿಯನ್ನು ಸುಪ್ರೀಂಕೋಟರ್್ ತಳ್ಳಿಹಾಕಿತ್ತು. ಈ ವಿವಾದಕ್ಕೆ ಸಂಬಂಧಿಸಿದ ಅಜರ್ಿ ವಿಚಾರಣೆ ನಾಳೆ ಏಪ್ರಿಲ್ 30ರಂದು ನಡೆಯಲಿದೆ.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 