ಜುಗೂಳ ಗ್ರಾಪಂನಿಂದ ಕೆಆರ್ಡಿಸಿ ಅಧ್ಯಕ್ಷ ಶಾಸಕ ಎಚ್.ಸಿ. ಬಾಲಕೃಷ್ಣರಿಗೆ ಮನವಿ
KRDC President MLA from Jugoola Gramam H.C. Appeal to Balakrishna
ಜುಗೂಳ ಗ್ರಾಪಂನಿಂದ ಕೆಆರ್ಡಿಸಿ ಅಧ್ಯಕ್ಷ ಶಾಸಕ ಎಚ್.ಸಿ. ಬಾಲಕೃಷ್ಣರಿಗೆ ಮನವಿ
ಕಾಗವಾಡ 20: ಕರ್ನಾಟಕ-ಮಹಾರಾಷ್ಟ್ರವನ್ನು ಜೋಡಿಸುವ ಜುಗೂಳ-ಖಿದ್ರಾಪೂರ ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಪ್ರವಾಹ ಸಂದರ್ಭದಲ್ಲಿ ನೀರು ನಿಲ್ಲದಂತೆ ಸೇತುವೆ ಬದಿಗೆ ಬಾಕ್ಸ್ ನಿರ್ಮಿಸಿ, ಪೈಪ್ ಅಳವಡಿಸಬೇಕು. ಮತ್ತು ಜುಗೂಳ-ಶಿರಗುಪ್ಪಿ ರಸ್ತೆಯನ್ನು ಅಗಲೀಕರಣ ಗೊಳಿಸಬೇಕೆಂದು ಗ್ರಾ.ಪಂ.ವತಿಯಿಂದ ಕೆಆರ್ಡಿಸಿ ಅಧ್ಯಕ್ಷ ಹಾಗೂ ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ಅವರಿಗೆ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ. ಎಚ್.ಸಿ. ಬಾಲಕೃಷ್ಣ ಅವರು ಸೋಮವಾರ ದಿ. 20ರಂದು ಜುಗೂಳ ಗ್ರಾಮಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮನವಿ ಸಲ್ಲಿಸಿ ಆಗ್ರಹಿಸಿದರು. ಈ ವೇಳೆ ಶಾಸಕ ರಾಜು ಕಾಗೆ ಉಪಸ್ಥಿತರಿದ್ದರು. ತಾಲೂಕಿನ ಜುಗೂಳ ಮತ್ತು ಮಹಾರಾಷ್ಟ್ರದ ಕೊಲ್ಲಾಪೂರ ಜಿಲ್ಲೆಯ ಶಿರೋಳ ತಾಲೂಕಿನ ಖಿದ್ರಾಪೂರ ಗ್ರಾಮದ ಮಧ್ಯ ಕೃಷ್ಣಾ ನದಿಗೆ ಅಡ್ಡಲಾಗಿ ಸೇತುವ ನಿರ್ಮಾಣ ಮಾಡಲಾಗಿದೆ. ಕಾಮಗಾರಿ ಶೇ. 80 ರಷ್ಟು ಪೂರ್ಣಗೊಂಡಿದ್ದು, ಮಹಾರಾಷ್ಟ್ರದ ಭಾಗದಲ್ಲಿ ಶೇ. 20 ರಷ್ಟು ಮಾತ್ರ ಬಾಕಿ ಉಳಿದಿದೆ. ಈ ಸೇತುವೆಯಿಂದಾಗಿ ಕರ್ನಾಟಕ ಮತ್ತು ಮಹಾರಾಷ್ಟ್ರದ ಜನರಿಗೆ ಸಾಕಷ್ಟು ಅನಕೂಲವಾಗಲಿದ್ದು, ಕಳೆದ ಅನೇಕ ದಿನಗಳಿಂದ ಕಾಮಗಾರಿ ಕುಂಠಿತಗೊಂಡಿದೆ. ಇಂದು ಸ್ಥಳಕ್ಕೆ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಚ್.ಸಿ. ಬಾಳಕೃಷ್ಣ, ಶಾಸಕ ರಾಜು ಕಾಗೆ ಭೇಟ್ಟಿ ನೀಡಿ, ಗುತ್ತಿಗೆದಾರರಿಗೆ ಮತ್ತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಹಾಗೂ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಸೂಚಿಸಿದರು. ನೂತನ ಸೇತುವೆಯ ಅಕ್ಕ-ಪಕ್ಕದಲ್ಲಿ ನಿರ್ಮಿಸಿರುವ ಮಣ್ಣಿನ ತಡೆಗೋಡೆಯಿಂದಾಗಿ ಪ್ರವಾಹ ಸಂದರ್ಭದಲ್ಲಿ ನೀರು ಗ್ರಾಮಕ್ಕೆ ನೂಗ್ಗುವ ಭೀತಿ ಹೆಚ್ಚಲಿದೆ ಆದ್ದರಿಂದ ತಡೆಗೋಡೆ ಮಧ್ಯೆ ಬಾಕ್ಸ್ ನಿರ್ಮಿಸಿ, ಜೊತೆಗೆ ಪೈಪ್ ಅಳವಡಿಸಿ, ನೀರು ಹರಿದು ಹೋಗುವಂತೆ ಮಾಡಿಕೊಡಬೇಕೆಂದು ಜುಗೂಳ ಗ್ರಾಮಸ್ಥರು ಕೇಳಿಕೊಂಡರು. ಅದಕ್ಕೆ ಅವರು ಸಕಾರಾತ್ಮವಾಗಿ ಸ್ಪಂದಿಸಿ, ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಮುಖಂಡರಾದ ಅಣ್ಣಾಸಾಬ ಪಾಟೀಲ, ಗ್ರಾಮ ಪಂಚಾಯತ ಅಧ್ಯಕ್ಷ ಕಾಕಾಸಾಬ ಪಾಟೀಲ, ಬಾಳಾಸಾಹೇಬ ಪಾಟೀಲ, ಅನೀಲ ಕಡೋಲೆ, ಅನೀಲ ಸುಂಕೆ, ಬಸವರಾಜ ನಂದಾಳೆ, ಬಾಬಾಸಾಬ ತಾರದಾಳೆ, ವಿಜಯ ಅಗಸರ, ಮಹಾದೇವ ಕಾಂಬಳೆ, ಚಿದಾನಂದ ಪಾಟೀಲ, ಸಂತೋಶ ಚಂದೂರೆ, ಕಾಮಗಾರಿ ಗುತ್ತಿಗೆ ಪಡೆದುಕೊಂಡಿರುವ ಬಿಎಸ್ಆರ್ ಕಂಪನಿಯ ಜಿಎಂ. ದೊರೆಸ್ವಾಮಿ, ಕೆಆರ್ಡಿಸಿಯ ಅಧಿಕಾರಿ ರಿಜವಾನ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ 