ಬೈಕ್ಗೆ ಕೆಎಸ್ಆರ್ಟಿಸಿಬಸ್ ಡಿಕ್ಕಿ: ಸವಾರ ಗಂಭೀರ ಗಾಯ
KSRTC bus collides with bike: rider seriously injured
ಬೈಕ್ಗೆ ಕೆಎಸ್ಆರ್ಟಿಸಿಬಸ್ ಡಿಕ್ಕಿ: ಸವಾರ ಗಂಭೀರ ಗಾಯ
ಇಂಡಿ 13: ತಾಲೂಕಿನ ತಡವಲಗಾ ಗ್ರಾಮದ ಬಳಿ ಇಂಡಿ -ವಿಜಯಪೂರ ರಾಜ್ಯ ಹೆದ್ದಾರಿಯ ಬಳಿ ಇಂಡಿಯಿಂದ ವಿಜಯಪೂರ ಕಡೆಗೆ ಹೋಗುತ್ತಿರುವ ಏಂ28 ಈ 2194 ಈ ಸಂಖ್ಯೆಯ ಬಸ್ಸು ತಡವಲಗಾ ಗ್ರಾಮದ ಬಳಿ ಬೈಕ್ಗೆ ಡಿಕ್ಕಿ ಹೊಡೆದ ಘಟನೆ ನಡೆದಿದ್ದು ಬಸ್ ಚಾಲಕ ಬಸ್ ನೊಂದಿಗೆ ಪರಾರಿಯಾಗಲು ಯತ್ನಿಸಿದ ಘಟನೆ ನಡೆದಿದೆ.
ಮಲ್ಲಪ್ಪ ಬಲವಂತಪ್ಪ ಖಸ್ಕಿ ಎಂಬ ಬೈಕ್ ಸವಾರ ತೀವ್ರ ಗಾಯಗೊಂಡಿದ್ದಾನೆ. ತಡವಲಗಾದಿಂದ ಜೋಡಗುಡಿಗೆ ಹೋಗುತ್ತಿರುವಾಗ ಬಸ್ಸು ಬೈಕ್ ಸವಾರನಿಗೆ ಹಿಂಬದಿ ಡಿಕ್ಕಿ ಹೊಡೆದು ಬಸ್ ಚಾಲಕ ಬಸ್ನ್ನು ನಿಲ್ಲಿಸದೆ ಪರಾರಿಯಾಗಲು ಪ್ರಯತ್ನಿಸಿದ್ದಾನೆ. ಇತನ ವರ್ತನೆಗೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಗಾಯಗೊಂಡ ಬೈಕ್ ಸವಾರನನ್ನು ತಕ್ಷಣ ತಡವಲಗಾ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ವಿಜಯಪೂರದ ಬಿಎಲ್ಡಿಇ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಗೊಂಡ ಬೈಕ್ ಸವಾರನ ಸ್ಥಿತಿ ಚಿಂತಾಜನಕವಾಗಿದೆ ಎಂದು ಕುಟುಂಬಸ್ದರು ತಿಳಿಸಿದ್ದಾರೆ.ಸಾರ್ವಜನಿಕರು ಬಸ್ಸನ್ನು ಬೆನ್ನಟ್ಟಿ ವಿಜಯಪೂರ ರೇಲ್ವೆ ಗೇಟ್ ಹತ್ತಿರ ತಡೆದಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 